ಬೆಂಗಳೂರು: ಆರೋಪ-ಪ್ರತ್ಯಾರೋಪಗಳ ಗದ್ದಲಕ್ಕೆ ಇಂದಿನ ಕಲಾಪ ಬಲಿಯಾಗಿದ್ದರಿಂದ ಸದನವನ್ನು ನಾಳೆಗೆ ಮುಂದೂಡಲಾಯಿತು. ಇದರಿಂದ ಇಂದು ನಡೆಯಬೇಕಿದ್ದ ವಿಶ್ವಾಸಮತ ಯಾಚನೆಯೂ ಮುಂದೂಡಿಕೆಯಾಯಿತು. ಆಡಳಿತ ಪಕ್ಷದವರು ಬೇಕೆಂದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ನಡುವೆ ನಾಳೆ ಮಧ್ಯಾಹ್ನ 1.30ರೊಳಗೆ ಬಹುಮತ ಸಾಬೀತು ಮಾಡುವಂತೆ ರಾಜ್ಯಪಾಲ ವಿ.ಆರ್.ವಾಲಾ ಅವರು ಸರ್ಕಾರಕ್ಕೆ ಮತ್ತು ಸ್ಪೀಕರ್ಗೆ ಸೂಚನೆ ನೀಡಿದ್ದಾರೆ.
ಆರ್ಟಿಕಲ್ 175(2)ರ ಪ್ರಕಾರ ನಾಳೆ ಮಧ್ಯಾಹ್ನ 1.30ರೊಳಗೆ ಬಹುಮತ ಸಾಬೀತು ಮಾಡುವಂತೆ ಗಡುವು ನಿಗದಿ ಮಾಡಿ ರಾಜ್ಯಪಾಲ ವಿ.ಆರ್.ವಾಲಾ ಅವರು ಸ್ಪೀಕರ್ಗೆ ಸೂಚನೆ ನೀಡಿದ್ದಾರೆ.
ಇಂದು ಸದನದಲ್ಲಿ ಶಾಸಕರು ತಮ್ಮ ಹಕ್ಕುಗಳ ಬಗ್ಗೆ ಚರ್ಚೆ ನಡೆಸುತ್ತಿರುವಾಗಲೇ ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ, ಬಹುಮತ ಸಾಬೀತು ಮಾಡಲು ಸರ್ಕಾರಕ್ಕೆ ಸೂಚನೆ ನೀಡುವಂತೆ ಮನವಿ ಮಾಡಿತ್ತು. ಇದೀಗ ರಾಜ್ಯ ರಾಜಕೀಯದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಅಖಾಡಕ್ಕೆ ರಾಜ್ಯಪಾಲರು ದುಮುಕ್ಕಿದ್ದಾರೆ. ನಾಳೆ ಮಧ್ಯಾಹ್ನ 1.30ರೊಳಗೆ ಸರ್ಕಾರ ಬಹುಮತ ಸಾಬೀತು ಮಾಡುವಂತೆ ಗಡುವು ನಿಗದಿ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮುಸ್ಲಿಮರು ಸರಕಾರದ ಕೆಲಸ ಮಾಡಬಾರದೇ? ಹಿಂದೂ ರಾಷ್ಟ್ರವಾಯಿತೇ ಭಾರತ!
ಆನ್ಲೈನ್ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ
ಕೊರೋನಾ ಅಬ್ಬರ: ಲಾಕ್ ಡೌನ್ ಬಗ್ಗೆ ಸಿಎಂ ಮಹತ್ವದ ಸಭೆ
ರಮೇಶ್ ಜಾರಕಿಹೊಳಿ ರಾಸಲೀಲೆ- ಸಂತ್ರಸ್ತೆಯಿಂದ ದೂರು ದಾಖಲು
ಬೆಳಗ್ಗಿನ ಅಝಾನ್ ಕರೆಗೂ ಧ್ವನಿವರ್ಧಕಗಳನ್ನು ಬಳಸಬಹುದು- ವಖ್ಫ್ ಬೋರ್ಡ್