ಮನಾಮ: ದೇಶದಲ್ಲಿ ಸ್ವದೇಶೀಯರು ವಾಸವಿರುವ ಪ್ರದೇಶಗಳಲ್ಲಿ ಬ್ಯಾಚುಲರ್ಗಳ ವಾಸವನ್ನು ಉಪೇಕ್ಷಿಸಲು ಕ್ಯಾಬಿನೆಟ್ ತೀರ್ಮಾನಿಸಿದ್ದು, ವಿವಿಧ ಸಚಿವಾಲಯಗಳ ಸಹಕಾರದೊಂದಿಗೆ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
ಬ್ಯಾಚುಲರ್ಗಳಾದ ಕಾರ್ಮಿಕರ ನಿವಾಸಗಳನ್ನು ಕೆಲವು ರೆಸಿಡೆನ್ಸಿಯಲ್ ಏರಿಯಾಗಳಿಂದ ಸ್ಥಳಾಂತರ ಮಾಡುವಂತೆ ಪ್ರಧಾನಮಂತ್ರಿ ಪ್ರಿನ್ಸ್ ಖಲೀಫ ಬಿನ್ ಸಲ್ಮಾನ್ ಅಲ್ ಖಲೀಫ ಕ್ಯಾಬಿನೆಟ್ ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಗೃಹ ಸಚಿವಾಲಯ, ಸಾರ್ವಜನಿಕ ಸಚಿವಾಲಯ, ಮುನಿಸಿಪಲ್- ನಗರಾಭಿವೃದ್ಧಿ ಸಚಿವಾಲಯಗಳ ಸಹಕಾರದೊಂದಿಗೆ ಕಾರ್ಯಗತಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಶಿಥಿಲಗೊಂಡು ವಾಸಯೋಗ್ಯವಲ್ಲದ ಕಟ್ಟಡಗಳ ವಾಸವನ್ನು ಉಪೇಕ್ಷಿಸಲು ಕ್ರಮ ಕೈಗೊಳ್ಳುವಂತೆಯೂ ಪ್ರಧಾನಿ ನಿರ್ದೇಶನ ನೀಡಿದ್ದಾರೆ. ಕಟ್ಟಡಗಳಲ್ಲಿ ಸಾಮಾಜಿಕ ಸುರಕ್ಷೆಗೆ ಅಪಾಯ ಉಂಟುಮಾಡಬಲ್ಲ ಕಾರ್ಯಗಳನ್ನು ಕೊನೆಗೊಳಿಸಬೇಕು ಎಂದು ಪ್ರಧಾನಿ ಹೇಳಿದ್ದಾರೆ. ಮೀನು ಹಿಡಿಯಲು ತಪ್ಪಾದ ರೀತಿಯನ್ನು ಅನುಸರಿಸುವುದರ ವಿರುದ್ದ ನಿಷೇಧ ಏರ್ಪಡಿಸಲು ಸಚಿವಾಲಯ ತೀರ್ಮಾನ ಕೈಗೊಂಡಿದೆ.
ಸಿಗಡಿ ಹಿಡಿಯುವುದಕ್ಕೆ ಅನುಮತಿ ಲಭಿಸಿರುವವರಿಗೆ ತೊಂದರೆ ಉಂಟಾಗದ ರೀತಿಯಲ್ಲಿ ಕಾನೂನು ಜಾರಿಯಾಗಲಿದೆ. ನಿಶೇಧಿತ ಬಲೆಗಳ ಮೂಲಕ ಸೀಗಡಿ ಹಿಡಿಯುವುದರ ಮೂಲಕ ಮತ್ಸ್ಯ ಸಂಪತ್ತಿನ ಉತ್ಪಾದನೆ ಕಡಿಮೆಯಾಗಬಹುದು ಎನ್ನುವ ಕಾರಣಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಸಚಿವಾಲಯಕ್ಕೆ ವಹಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ