ಮುಡಿಪು, ಜು 25: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ಮುಡಿಪು ಡಿವಿಶನ್ ಇದರ ಅರ್ಧ ವಾರ್ಷಿಕ ಕೌನ್ಸಿಲ್ ಜುಲೈ 25 ರಂದು ಮಗ್ರಿಬ್ ನಮಾಝಿನ ಬಳಿಕ ಡಿವಿಶನ್ ಅಧ್ಯಕ್ಷರಾದ ತೌಸೀಫ್ ಸಅದಿ ಹರೇಕಳರವರ ಅಧ್ಯಕ್ಷತೆಯಲ್ಲಿ ಮುನವ್ವಿರುಲ್ ಇಸ್ಲಾಂ ಮದ್ರಸ ಹಾಲ್, ಮುಡಿಪುವಿನಲ್ಲಿ ನಡೆಯಿತು.

ದ. ಕ ಜಿಲ್ಲಾ ಕಾರ್ಯದರ್ಶಿ ಜಮಾಲುದ್ದೀನ್ ಸಖಾಫಿ ಮುದುಂಗಾರ್ ರವರು ಪ್ರಾರ್ಥನೆಗೆ ನೇತೃತ್ವ ನೀಡಿದರು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಡಿವಿಶನ್ ಪ್ರ.ಕಾರ್ಯದರ್ಶಿ ಇಲ್ಯಾಸ್ ಪೊಟ್ಟೋಳಿಕೆ ವರದಿಯನ್ನೂ, ಕೋಶಾಧಿಕಾರಿ ಶರೀಫ್ ಮುಡಿಪುರವರು ಲೆಕ್ಕಪತ್ರವನ್ನೂ, ಕ್ಯಾಂಪಸ್ ಕಾರ್ಯದರ್ಶಿ ಅಬೂಸ್ವಾಲಿಹ್ ಹರೇಕಳರವರು ಕ್ಯಾಂಪಸ್ ವರದಿಯನ್ನೂ ಸಭೆಯಲ್ಲಿ ಮಂಡಿಸಿದರು.
ವೀಕ್ಷಕರಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿಯಾದ ಮುಹಮ್ಮದ್ ಅಲಿ ತುಕ೯ಲಿಕೆ ಸಂಘಟನಾ ತರಗತಿಯನ್ನು ನಡೆಸಿದರು. ಜಿಲ್ಲಾ ಅಧ್ಯಕ್ಷರಾದ ಇಬ್ರಾಹಿಂ ಸಖಾಫಿ ಸೆರ್ಕಳ ಆಶಂಸಾ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಡಿವಿಶನ್ ಉಪಾಧ್ಯಕ್ಷರಾದ ಇಬ್ರಾಹಿಂ ಅಹ್ಸನಿ ಮಂಜನಾಡಿ, ಕಾರ್ಯದರ್ಶಿಗಳಾದ ನೌಫಲ್ ಫರೀದ್ ನಗರ, ಮೊಯ್ದಿನ್ ಮೋರ್ಲ ಹಾಗೂ ಡಿವಿಶನ್ ನ ಎಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, ಸೆಕ್ಟರ್ ನಿಂದ ಬಂದ ಡಿವಿಶನ್ ಕೌನ್ಸಿಲರ್ ಗಳು ಉಪಸ್ಥಿತರಿದ್ದರು.
ಡಿವಿಶನ್ ಪ್ರಧಾನ ಕಾರ್ಯದಶಿ೯ ಇಲ್ಯಾಸ್ ಪೊಟ್ಟೋಳಿಕೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು..






