ಬೆಂಗಳೂರು : ಧಾರ್ಮಿಕ ಲೌಕಿಕ ಸಮನ್ವಯ ಶಿಕ್ಷಣದಲ್ಲಿ ಹದಿನೈದು ಸಂವತ್ಸರಗಳನ್ನು ಪೂರೈಸಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಡುತ್ತಿರುವ ಸಅದಿಯ ಎಜುಕೇಶನಲ್ ಫೌಂಡೇಷನ್ ಬೆಂಗಳೂರು ಇದರ ಸ್ಪಟಿಕ ಮಹೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಧಾರ್ಮಿಕ ವಿಭಾಗದಲ್ಲಿ ಮುಖ್ತಸರ್ ಮತ್ತು ಲೌಕಿಕ ವಿಭಾಗದಲ್ಲಿ ಬಿಕಾಂ ಶಿಕ್ಷಣ ಪೂರ್ಣಗೊಳಿಸಿದ 20 ವಿದ್ಯಾರ್ಥಿಗಳ ಪದವಿ ಪ್ರಧಾನ ಕಾರ್ಯಕ್ರಮ ಮತ್ತು 15 ಬಡ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು ಬ್ಯಾರಿ ಉದ್ಯಮಿ ಅಭಿಮಾನ್ ಕಂಪೆನಿಯ ಮಾಲಕರಾದ ಅಲ್ ಹಾಜ್ ಬಿ.ಎಂ ಉಮರ್ ಹಾಜಿಯವರ ಸಹಯೋಗದೊಂದಿಗೆ ನಡೆಯುವ ಅದ್ದೂರಿ ಕಾರ್ಯಕ್ರಮ ದಿನಾಂಕ 15 ಆಗಸ್ಟ್ 2019 ಗುರುವಾರ 3 ಗಂಟೆಯಿಂದ ರಾತ್ರಿ 9ರ ತನಕ ಅರಮನೆ ಮೈದಾನದಲ್ಲಿ ನಡೆಯಲಿದೆ.
ದಕ್ಷಿಣ ಭಾರತದ ಅತ್ಯುನ್ನತ ವಿದ್ಯಾ ಕೇಂದ್ರವಾದ ಜಾಮಿಯಾ ಸಅದಿಯಾ ಅರೇಬಿಯಾ ಕಾಸರಗೋಡು ಇದರ ಅಧ್ಯಕ್ಷರೂ ಆಧ್ಯಾತ್ಮಿಕ ನಾಯಕರೂ ಆದ ಅಸ್ಸಯ್ಯಿದ್ ಕೆ.ಎಸ್ ಆಟ್ಟಕೊಯ ತಂಙಳ್ ಕುಂಬೊಳ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಧಾರ್ಮಿಕ ,ರಾಜಕೀಯ ,ಸಾಮಾಜಿಕ ರಂಗದ ಹಲವು ನಾಯಕರು ಬಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಸಾರಥಿ ಮೌಲಾನಾ ಎನ್.ಕೆ.ಎಂ ಶಾಫಿ ಸಅದಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ