ಉಡುಪಿ: ಎನ್ ಐ ಎ ಯಾವುದೇ ತನಿಖೆ ನಡೆಸದೇ ಮಾಧ್ಯಮಗಳು ರವೂಫ್ ರವರನ್ನು ಭಯೋತ್ಪಾದಕ ಅಂತ ಚಿತ್ರೀಕರಿಸಲು ಮಾಧ್ಯಮಗಳಿಗೆ ಮಾಹಿತಿ ನೀಡಿದವರು ಯಾರು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಕೆ.ಎ. ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಸಮಿತಿ ಹಮ್ಮಿಕೊಂಡ ಸಭೆಯಲ್ಲಿ ಪ್ರಶ್ನಿಸಿದರು.
ಮಾಧ್ಯಮಗಳು ಸಮಾಜದ ಬೆಳಕಾಗಿರಬೇಕೇ ಹೊರತು ಧರ್ಮಕ್ಕೆ ದ್ರೋಹ ಬಗೆಯುವವರಾಗಬಾರದು. ಈಗೀಗ ಮಾಧ್ಯಮಗಳ ಸೃಷ್ಟಿಯಿಂದಲೇ ಇಂತಹ ಅನಾಹುತಗಳಿಗೆ ಕಾರಣ ಎಂದು ಕಲ್ಲಟ್ಟ ರಝ್ವಿ ಹೇಳಿದರು.
ಇಸ್ಲಾಂ ಪ್ರೀತಿಯನ್ನು ಕಲಿಸಿಕೊಡುತ್ತದೆ. ಭಯೋತ್ಪಾದನೆಗೆ ಯಾವತ್ತೂ ಕೂಡ ಅನುಮತಿಸಿಲ್ಲ. ಅನುಮತಿಸುವುದೂ ಇಲ್ಲ. ದೇಶದಲ್ಲಿ ನಿರಂತರವಾಗಿ ಭಯೋತ್ಪಾದನೆಯ ಹೆಸರಿನಲ್ಲಿ ಬಂಧಿಸಲ್ಪಟ್ಟ ಯುವಕರೂ ಇದೇ ರೀತಿಯ ಷಡ್ಯಂತ್ರಗಳಿಗೆ ಬಲಿಪಶು ಆಗಿರಬಹುದೆನ್ನುವ ಸಂಶಯ ಕಾಡುತ್ತಿದೆ ಎಂದು ಅವರು ಹೇಳಿದರು.
ರವೂಫ್ ರವರ ಕುರಿತು ಆಧಾರ ರಹಿತ ಆರೋಪವನ್ನು ಬಿತ್ತರಿಸಿದ ಮಾಧ್ಯಮಗಳು ಕರ್ನಾಟಕ ಜನತೆಯೊಂದಿಗೆ ಕ್ಷಮೆಯಾಚಿಸಬೇಕಾಗಿದೆ ಎಂದು ಕಲ್ಕಟ್ಟ ರಝ್ವಿ ಇದೇ ಸಂದರ್ಭದಲ್ಲಿ ಆಗ್ರಹಿಸಿದರು.
ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷರಾದ ಎಂ.ಎಚ್. ಅಹ್ಮದ್ ಶಬೀರ್ ಸಖಾಫಿ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಸಿಟಿ ಬಸ್ ಸ್ಟಾಂಡ್ ಬಳಿ ನಡೆದ ಸಭೆಯಲ್ಲಿ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಕೋಶಾಧಿಕಾರಿ ಹಾಜಿ ಅಬ್ದುಲ್ ವಹೀದ್ ಉಡುಪಿ, ಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷ ಮುಹಿಯ್ಯದ್ದೀನ್ ಸಖಾಫಿ ಪಯ್ಯಾರು, ಅಬ್ದುಲ್ ಖಯ್ಯೂಂ ಹೂಡೆ, ಫಾರೂಖ್ ಟಾಪ್ ಸೆಲಕ್ಷನ್, ಜಿಲ್ಲಾ ಸದಸ್ಯರಾದ ಮುಹಮ್ಮದ್ ಸಮೀರ್ ಕೋಡಿ, ನಿಝಾಮ್ ಕುಂದಾಪುರ, ಅಬ್ದುಲ್ ಅಝೀಝ್ ಕಾಪು , ಸಮೀಮ್ ಉಡುಪಿ, ಆಸಿಫ್ ಬೆಳಪು, ನಾಸಿರ್ ಉಚ್ಚಿಲ ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಎಂ.ಕೆ. ಇಬ್ರಾಹಿಮ್ ಮಜೂರು ಸ್ವಾಗತಿಸಿ, ತ್ವಾಯಿರ್ ಮೂಡುಗೋಪಾಡಿ ವಂದಿಸಿದರು.
ವರದಿ:- PMS ಪಡುಬಿದ್ರಿ.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ