ಕುವೈಟ್: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಕುವೈಟ್ ಇದರ ನಾರ್ತ್ ಝೋನಿನ ವತಿಯಿಂದ ಮೊಹರಂ ಹಿಜರಿ ಸಂದೇಶ ಕಾರ್ಯಕ್ರಮವು ನಾಶಾತ್ ಹಾಲ್ ಮುರ್ಗಾಬ್ ಸಿಟಿ ಯಲ್ಲಿ ನಡೆಯಿತು.
ನಾರ್ತ್ ಝೋನಿನ ಪ್ರಧಾನ ಕಾರ್ಯದರ್ಶಿ ಶೌಕತ್ ಶಿರ್ವ ಸ್ವಾಗತ ಮಾಡಿದರು. ಅಬ್ಬಾಸ್ ಬಳಂಜ ಇವರ ಅಧ್ಯಕ್ಷತೆಯಲ್ಲಿ , ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹು ಅಬ್ದುಲ್ ರಹ್ಮಾನ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. inc ಸಂಘಟನಾ ಕಾರ್ಯದರ್ಶಿ ಬಹು ಹುಸೈನ್ ಎರ್ಮಾಡ್ ಉಸ್ತಾದ್ ಮಾತನಾಡಿ ಸಂಘಟನೆಯ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯ ಆದ್ದರಿಂದ ತಾವೆಲ್ಲರೂ ಕೈ ಜೋಡಿಸ ಬೇಕೆಂದು ವಿನಂತಿಸಿದರು.
ಕೆಸಿಎಫ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಝಕರಿಯಾ ಆನೇಕಲ್ ಕಾರ್ಯಕ್ರಮಕ್ಕೆ ಶುಭ ಕೋರಿದರು. ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಾಂತ್ವನ ವಿಭಾಗದ ಅಧ್ಯಕ್ಷರಾದ ಯಾಕುಬ್ ಕಾರ್ಕಳ ಮಾತನಾಡಿ ಕರ್ನಾಟಕ ದಲ್ಲಿ ಸಂಭವಿಸಿದ ಪ್ರವಾಹಕ್ಕೆ ತುತ್ತಾದ ಪ್ರದೇಶದ ಕುಟುಂಬಗಳಿಗೆ ಕೆಸಿಎಫ್ ನ ಎಲ್ಲಾ ಸದಸ್ಯರು ಸಾಂತ್ವನದ ಪರಿಹಾರ ನಿಧಿಗೆ ಸಹಾಯ ಹಸ್ತ ನೀಡ ಬೇಕೆಂದು ವಿನಂತಿಸಿಕೊಂಡರು.

ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಸಿಟಿ ಸೆಕ್ಟರ್ ನ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಬಹು: ಬಶೀರ್ ಸಖಾಫಿ ಉಸ್ತಾದ್ ರವರು ಮೊಹರಂ ಹಿಜರಿ ಸಂದೇಶದ ವಿಶೇಷತೆಗಳನ್ನು ಸವಿಸ್ತಾರವಾಗಿ ವಿವರಿಸಿದರು. ಕೊನೆಯಲ್ಲಿ ಬಹುಯ:ಶಾಹುಲ್ ಹಮೀದ್ ಸಅದಿ ಝುಹುರಿ ಉಸ್ತಾದರು ದುವಾ ನೆರವೇರಿಸಿದರು.
ಕಾರ್ಯಕ್ರಮ ದಲ್ಲಿ ಕುವೈಟ್ ಅಲ್ ಮದೀನಾ ಅಧ್ಯಕ್ಷರಾದ ಅಹ್ಮದ್ ಬಾವ, ಇಬ್ರಾಹಿಂ ವೇಣೂರು ಪ್ರಕಾಶನ ವಿಭಾಗದ ಅಧ್ಯಕ್ಷರು,ರಾಷ್ಟ್ರೀಯ ಸಮಿತಿಯ ಕೋಶಾಧಿಕಾರಿ ಮೂಸ ಇಬ್ರಾಹಿಂ, ಸಂಘಟನಾ ವಿಭಾಗದ ಕಾರ್ಯದರ್ಶಿ ತೌಫೀಕ್ ಅಡ್ಡೂರು ಹಾಗೂ ರಾಷ್ಟ್ರೀಯ ಸಮಿತಿಯ ನಾಯಕರು ಝೋನಿನ ನಾಯಕರು ಮತ್ತು ಸೆಕ್ಟರಿನ ಎಲ್ಲಾ ನಾಯಕರು ಪಾಲ್ಗೊಂಡಿದ್ದರು.ವಹೀಬ್ ಕೆ. ಸಿ ರೋಡ್ ಧನ್ಯವಾದ ಗೈದರು.
ವರದಿ: ಇಬ್ರಾಹಿಂ ವೇಣೂರು
ಪ್ರಕಾಶನ ವಿಭಾಗ ಕುವೈತ್















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ