ಬೆಂಗಳೂರು: ಡಿ.ಕೆ.ಶಿವಕುಮಾರ್ ಬಂಧನ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಈ ವಿಚಾರದಲ್ಲಿ ತಟಸ್ಥವಾಗಿರುವ ಮಾಜಿ ಸಿಎಂ ಸಿದ್ಧರಾಮಯ್ಯನವರಿಗೆ ಖಡಕ್ ವಾರ್ನಿಂಗ್ ರವಾನಿಸಿದ್ದಾರೆ.
ಹೌದು ಡಿಕೆಶಿ ವಿಚಾರವಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾಜಿ ಸಿಎಂ ಹಾಗೂ ಸಿಎಲ್ಪಿ ನಾಯಕ ಸಿದ್ಧರಾಮಯ್ಯನವರ ಜೊತೆ ಐದು ನಿಮಿಷಗಳ ಕಾಲ ಚರ್ಚೆ ನಡೆಸಿದ್ದು, ಡಿಕೆಶಿಯವರ ಪರ ನಡೆಯುತ್ತಿರುವ ಹೋರಾಟ, ಪ್ರತಿಭಟನೆಗಳು ಸಾಕಾಗುತ್ತಿಲ್ಲ ಎಂಬ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಸಿಎಲ್ಪಿ ನಾಯಕರಾಗಿ ನಿಮ್ಮ ಹೋರಾಟ ಸಾಕಾಗುತ್ತಿಲ್ಲ ಎಂದು ನೇರವಾಗಿ ಆಕ್ಷೇಪ ವ್ಯಕ್ತಪಡಿಸಿರುವ ಸೋನಿಯಾಗಾಂಧಿಯವರು, ಪ್ರತಿ ವಿಧಾನಸಭಾವಾರು ಹೋರಾಟ ನಡೆಸೋದು ನಿಮ್ಮ ಜವಾಬ್ದಾರಿ ಎಂದು ಎಚ್ಚರಿಸಿದ್ದಾರೆ. ಅಲ್ಲದೇ ಕರ್ನಾಟಕದಾದ್ಯಂತ ವಿಧಾನಸಭಾವಾರು ನಡೆಯುವ ಹೋರಾಟವನ್ನು ವಹಿಸಿಕೊಂಡು, ಇಡಿ ಕರ್ನಾಟಕವೇ ಡಿಕೆಶಿ ಪರ ನಿಲ್ಲುವಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದೇ ಎಂದು ಸಿದ್ಧುಗೆ ಸೋನಿಯಾ ಹೇಳಿದ್ದಾರೆ. ಡಿಕೆಶಿ ಬಂಧನವಾದಾಗಿನಿಂದಲೂ ಸೋನಿಯಾ ಗಾಂಧಿಯವರು ಡಿಕೆಶಿ ಕುಟುಂಬದ ಜೊತೆ ನಿಂತಿದ್ದು, ಈಗಾಗಲೇ ಡಿ.ಕೆ.ಸುರೇಶ್ ಜೊತೆಯೂ ಮಾತನಾಡಿ ಧೈರ್ಯ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ