janadhvani

Kannada Online News Paper

ಬ್ಯಾರಿ ನಿಖಾಃ ಹೆಲ್ಪ್ ಲೈನ್ ಅಂತರಾಷ್ಟ್ರೀಯ ನೂತನ ಸಮಿತಿ ರಚನೆ

ಕಳೆದ ಮೂರು ವರ್ಷಗಳಿಂದ ಸಕ್ರಿಯವಾಗಿ ಹಲವಾರು ಯೋಜನೆಗಳೊಂದಿಗೆ ಸಾಮಾಜಿಕ ರಂಗದಲ್ಲಿ ಮಿಂಚುತ್ತಿರುವ ಬ್ಯಾರಿ ನಿಖಾಃ ಹೆಲ್ಪ್ ಲೈನ್ ತಂಡ ವಧು ವರರಿಗೆ ಸೂಕ್ತ ವೈವಾಹಿಕ ಸಂಭಂಧವನ್ನು ಕಲ್ಪಿಸಿಕೊಡುವುದಲ್ಲದೇ ಆರ್ಥಿಕವಾಗಿ ಅಶಕ್ತರಾದ ಕುಟುಂಬದ ವಿವಾಹ ಸಮಾರಂಭಕ್ಕೆ ಮದುವೆ ಉಡುಪುಗಳನ್ನು ನೀಡಿಯೂ , ಪ್ರವಾಹ ಪೀಡಿತ ಪ್ರದೇಶ ನಿವಾಸಿಗಳಿಗೆ ತಕ್ಷಣ ಸ್ಪಂದಿಸಿ ಬಟ್ಟೆ ಬರೆ, ಆಹಾರ ಹಾಗೂ ದಿನ ಬಳಕೆಯ ಸಾಮಾಗ್ರಿಗಳನ್ನು ನೀಡಿ ನೆರೆ ಪರಿಹಾರದಲ್ಲಿ ತೊಡಗಿಸಿಕೊಳ್ಳುತ್ತಾ, ಮಂಗಳೂರಿನ ಆಸುಪಾಸಿನ ನಿರಾಶ್ರಿತರಿಗೂ ಸರಕಾರೀ ಆಸ್ಪತ್ರೆಗಳಲ್ಲಿರುವ ಒಳರೋಗಿಗಳಿಗೂ ಮೂಲಭೂತ ಹಕ್ಕುಗಳ ನೆರವು ನೀಡುತ್ತಾ ಸಂತೃಪ್ತಿ ಹೊಂದುವ ಬ್ಯಾರಿ ನಿಖಾಃ ಹೆಲ್ಪ್ ಲೈನ್ ತಂಡದ ಅಂತರಾಷ್ಟ್ರೀಯ ನೂತನ ಸಮಿತಿಯು ರಚನೆಯಾಯಿತು.

ತಂಡದ ಅಧ್ಯಕ್ಷರಾಗಿ ಇಮ್ತಿಯಾಝ್ ಉಡುಪಿ ( ಒಮಾನ್ ), ಉಪಾಧ್ಯಕ್ಷರಾಗಿ ಅಬ್ದುಲ್ ಮಜೀದ್ ಬಾಹಸನೀ( ಸೌದಿ ಅರೇಬಿಯಾ ), ಪ್ರಧಾನ ಕಾರ್ಯದರ್ಶಿಯಾಗಿ ಇರ್ಫಾನ್ ಕಲ್ಲಡ್ಕ ( ದುಬೈ), ಸಂಘಟನಾ ಸಲಹೆಗಾರರಾಗಿ ಖಲಂದರ್ ರಝ್ವಿ ಬೆಜ್ಜವಳ್ಳಿ ( ದುಬೈ), ಕೋಶಾಧಿಕಾರಿಯಾಗಿ ಸುಹೈಲ್ ತೊಕ್ಕೊಟ್ಟು, ಸಾಂತ್ವನ ವಿಭಾಗದ ಕಾರ್ಯದರ್ಶಿಯಾಗಿ ಮಜೀದ್ ಬಿಕರ್ನಕಟ್ಟೆ, ಮಾಧ್ಯಮ ವಿಭಾಗದ ಕಾರ್ಯದರ್ಶಿಯಾಗಿ ಫೌಸಿಲ್ ನೆಕ್ಕರೆ, ಮಾಹಿತಿ – ಸಂಪರ್ಕ ಕಾರ್ಯದರ್ಶಿಯಾಗಿ ಅಶ್ರಫ್ ಶಿರ್ವ ( ಸೌದಿ ಅರೇಬಿಯಾ ), ಸಂಘಟನಾ ಕಾರ್ಯದರ್ಶಿಯಾಗಿ ನೌಶಾದ್ ಅಮ್ಮೆಂಬಳ ಆಯ್ಕೆಯಾದರು.

ನೂತನವಾಗಿ ನೇಮಕಗೊಂಡ ಎಲ್ಲಾ ಪದಾಧಿಕಾರಿಗಳಿಗೂ ಶುಭಕೋರಿದ ತಂಡದ ಸ್ಥಾಪಕಾಧ್ಯಕ್ಷರಾದ ರಾಶ್ ಬ್ಯಾರಿ ಮುಂದಿನ ಯೋಜನೆಯ ಬಗೆಗಿನ ಮಾಹಿತಿ ಹಾಗೂ ಕಾರ್ಯಕ್ಷಮತೆಯ ಬಗ್ಗೆ ನಿರ್ದೇಶನವನ್ನು ನೀಡಿದರು.

ಮಾಧ್ಯಮ ವಿಭಾಗ :(ಬ್ಯಾರಿ ನಿಖಾಃ ಹೆಲ್ಪ್ ಲೈನ್)