ತುಮಕೂರು : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್ ರಾಜ್ಯದಾದ್ಯಂತ ಹಮ್ಮಿಕೊಂಡ ಜಿಲ್ಲಾ ಮಟ್ಟದ ಕ್ಯು ಟೀಂ ZAKVIC ಕಾರ್ಯಕ್ರಮ ತುಮಕೂರು ಜಿಲ್ಲೆಯ ವತಿಯಿಂದ ತುಮಕೂರು ಯಾಸೀನ್ ಸ್ಕೂಲ್ ನಲ್ಲಿ ಅದ್ದೂರಿಯಾಗಿ ನಡೆಯಿತು.

ಎಸ್ಸೆಸ್ಸೆಫ್ ತುಮಕೂರು ಜಿಲ್ಲಾಧ್ಯಕ್ಷ ಸುಹೈಲ್ ಅಹ್ಮದ್ ಅಧ್ಯಕ್ಷತೆ ವಹಿಸಿದರು. ಎಸ್ಸೆಸ್ಸೆಫ್ ರಾಜ್ಯ ನಾಯಕರಾದ ಆರಿಫ್ ರಝಾ ತುಮಕೂರು ಸಭೆಯನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಮಂಗಳೂರು ಕ್ಯು ಟೀಂ ರೂಪುರೇಷೆಗಳು ಹಾಗೂ ಅದರ ಗುರಿಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲೆಯ ವಿವಿಧೆಡೆಗಳಲ್ಲಿ ಕ್ಯುಟೀಂ ಕಾರ್ಯಕರ್ತರನ್ನು ಸಂಘಟಿಸಿ ಸಕ್ರೀಯ ಕಾರ್ಯಕರ್ತರ ಒಂದು ಬಲಿಷ್ಠ ತಂಡವನ್ನು ಕಟ್ಟುವ ಬಗ್ಗೆ ಚರ್ಚಿಸಲಾಯಿತು.

ಉನೈಸ್ ಬುಖಾರಿ, ಸಾಬಿತ್ ಇರ್ಫಾನಿ, ಅಬ್ದುಸ್ಸಮದ್, ರೋಷನ್ ಇಸ್ಮಾಯೀಲ್ ಉಪಸ್ಥಿತರಿದ್ದರು.
ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಫಿಝ್ ಶಾಬಾಝ್ ಅಶ್ರಫಿ ಸ್ವಾಗತಿಸಿ ಕ್ಯು ಟೀಂ ಡಿಸ್ಟ್ರಿಕ್ಟ್ ಡೈರೆಕ್ಟರ್ ಶಮೀರ್ ಹಿಮಮಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ