ದುಬೈ: ದುಬೈ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಸಾಮಾನು ಸರಂಜಾಮುಗಳಿಂದ ಮಾವಿನ ಹಣ್ಣು ಕದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ದ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಿದೆ. 27 ವರ್ಷದ ಭಾರತೀಯ ನಾಗರಿಕ ಎರಡು ಮಾವಿನಹಣ್ಣುಗಳನ್ನು ದೋಚಿದ್ದ. ನ್ಯಾಯಾಲಯದ ದಾಖಲೆಗಳ ಪ್ರಕಾರ, ಇದು 6 ದಿರ್ಹಂ ಬೆಲೆ ಬಾಳುತ್ತದೆ.
ಈ ಘಟನೆ 2017 ಆಗಸ್ಟ್ 11ರಂದು ಸಂಭವಿಸಿದೆ. ವಿಮಾನ ನಿಲ್ದಾಣದ ನೌಕರನನ್ನು ಸರಕಾರಿ ಅಧಿಕಾರಿ ಎಂದು ಪರಿಗಣಿಸಿ ಕಳ್ಳತನದ ಆರೋಪ ಹೊರಿಸಲಾಗಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ. ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಆತ ಕೆಲಸ ನಿರ್ವಹಿಸುತ್ತಿದ್ದು, ಅಲ್ಲಿ ಪ್ರಯಾಣಿಕರ ಸಾಮಾನುಗಳನ್ನು ಕಂಟೇನರ್ನಿಂದ ಕನ್ವೇಯರ್ ಬೆಲ್ಟ್ಗೆ ಸಾಗಿಸುವುದು ಆತನ ಕೆಲಸವಾಗಿತ್ತು. ಈ ಮಧ್ಯೆ, ಭಾರತಕ್ಕೆ ಸಾಗಿಸಬೇಕಿದ್ದ ಸಾಮಾನು ಸರಂಜಾಮುಗಳಿಂದ ಆತ ಎರಡು ಮಾವಿನ ಹಣ್ಣುಗಳನ್ನು ಕಳವು ಮಾಡಿರುವುದಾಗಿ ಪ್ರಕರಣ ದಾಖಲಿಸಲಾಗಿತ್ತು. ಬಾಯಾರಿಕೆ ಉಂಟಾಗಿ ನೀರು ಹುಡುಕಾಟದಲ್ಲಿದ್ದ ವೇಳೆ ಈ ಮಾವಿನ ಹಣ್ಣುಗಳನ್ನು ಕದ್ದಿದ್ದೇನೆ ಎಂದು ಆತ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.
2018 ರ ಏಪ್ರಿಲ್ನಲ್ಲಿ ಪೊಲೀಸರು ಆತನನ್ನು ಕರೆದು ಪ್ರಶ್ನಿಸಿದರು. ತರುವಾಯ ಬಂಧನವನ್ನು ದಾಖಲಿಸಲಾಯ್ತು ಮತ್ತು ಆತನ ನಿವಾಸದಲ್ಲಿ ಶೋಧ ಕಾರ್ಯ ನಡೆಸಲಾಯಿತು. ಕದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಆದರೆ, ಮಾವಿನ ಚೀಲವನ್ನು ತೆಗೆದುಕೊಳ್ಳುವ ಬಗ್ಗೆ ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಿದ್ದೇನೆ ಎಂದು ಭದ್ರತಾ ಅಧಿಕಾರಿ ಹೇಳಿದ್ದಾರೆ. ನ್ಯಾಯಾಲಯ ಈ ಪ್ರಕರಣದ ಬಗ್ಗೆ ಸೆಪ್ಟೆಂಬರ್ 23 ರಂದು ತೀರ್ಪು ನೀಡಲಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ