ದುಬೈ: ದುಬೈ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಸಾಮಾನು ಸರಂಜಾಮುಗಳಿಂದ ಮಾವಿನ ಹಣ್ಣು ಕದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ದ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಿದೆ. 27 ವರ್ಷದ ಭಾರತೀಯ ನಾಗರಿಕ ಎರಡು ಮಾವಿನಹಣ್ಣುಗಳನ್ನು ದೋಚಿದ್ದ. ನ್ಯಾಯಾಲಯದ ದಾಖಲೆಗಳ ಪ್ರಕಾರ, ಇದು 6 ದಿರ್ಹಂ ಬೆಲೆ ಬಾಳುತ್ತದೆ.
ಈ ಘಟನೆ 2017 ಆಗಸ್ಟ್ 11ರಂದು ಸಂಭವಿಸಿದೆ. ವಿಮಾನ ನಿಲ್ದಾಣದ ನೌಕರನನ್ನು ಸರಕಾರಿ ಅಧಿಕಾರಿ ಎಂದು ಪರಿಗಣಿಸಿ ಕಳ್ಳತನದ ಆರೋಪ ಹೊರಿಸಲಾಗಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ. ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಆತ ಕೆಲಸ ನಿರ್ವಹಿಸುತ್ತಿದ್ದು, ಅಲ್ಲಿ ಪ್ರಯಾಣಿಕರ ಸಾಮಾನುಗಳನ್ನು ಕಂಟೇನರ್ನಿಂದ ಕನ್ವೇಯರ್ ಬೆಲ್ಟ್ಗೆ ಸಾಗಿಸುವುದು ಆತನ ಕೆಲಸವಾಗಿತ್ತು. ಈ ಮಧ್ಯೆ, ಭಾರತಕ್ಕೆ ಸಾಗಿಸಬೇಕಿದ್ದ ಸಾಮಾನು ಸರಂಜಾಮುಗಳಿಂದ ಆತ ಎರಡು ಮಾವಿನ ಹಣ್ಣುಗಳನ್ನು ಕಳವು ಮಾಡಿರುವುದಾಗಿ ಪ್ರಕರಣ ದಾಖಲಿಸಲಾಗಿತ್ತು. ಬಾಯಾರಿಕೆ ಉಂಟಾಗಿ ನೀರು ಹುಡುಕಾಟದಲ್ಲಿದ್ದ ವೇಳೆ ಈ ಮಾವಿನ ಹಣ್ಣುಗಳನ್ನು ಕದ್ದಿದ್ದೇನೆ ಎಂದು ಆತ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.
2018 ರ ಏಪ್ರಿಲ್ನಲ್ಲಿ ಪೊಲೀಸರು ಆತನನ್ನು ಕರೆದು ಪ್ರಶ್ನಿಸಿದರು. ತರುವಾಯ ಬಂಧನವನ್ನು ದಾಖಲಿಸಲಾಯ್ತು ಮತ್ತು ಆತನ ನಿವಾಸದಲ್ಲಿ ಶೋಧ ಕಾರ್ಯ ನಡೆಸಲಾಯಿತು. ಕದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಆದರೆ, ಮಾವಿನ ಚೀಲವನ್ನು ತೆಗೆದುಕೊಳ್ಳುವ ಬಗ್ಗೆ ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಿದ್ದೇನೆ ಎಂದು ಭದ್ರತಾ ಅಧಿಕಾರಿ ಹೇಳಿದ್ದಾರೆ. ನ್ಯಾಯಾಲಯ ಈ ಪ್ರಕರಣದ ಬಗ್ಗೆ ಸೆಪ್ಟೆಂಬರ್ 23 ರಂದು ತೀರ್ಪು ನೀಡಲಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ