ದಾವಣಗೆರೆ. ಸೆ,22: ಕೆಲವು ರಾಜಕಾರಣಿಗಳು ಸಮುದಾಯದ ಒಗ್ಗಟ್ಟಿಗೆ ತೊಡಕಾಗುತ್ತಿದ್ದು, ಪಕ್ಷ ನಿಷ್ಠೆಯ ಹೆಸರಿನಲ್ಲಿ ಸಮುದಾಯದ ಒಗ್ಗಟ್ಟಿಗೆ ಮಾರಕಾವಾಗುತ್ತಿರುವ ಕೆಲವು ಬೆಳವಣಿಗೆಗಳು ರಾಜ್ಯದ ವಿವಿಧ ಕಡೆಗಳಲ್ಲಿ ಇತ್ತೀಚೆಗೆ ಕಂಡು ಬರುತ್ತಿದೆ ಇದು ಖೇದಕರ ಮತ್ತು ಖಂಡನೀಯವಾಗಿದೆ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಶಾಫಿ ಸಅದಿ ಯವರು ಹೇಳಿದರು.
ಅವರು ಕರ್ನಾಟಕ ಮುಸ್ಲಿಂ ಜಮಾಅತ್ ದಾವಣಗೆರೆ ಜಿಲ್ಲಾ ಸಮಿತಿ ರಚನೆ ಕಾರ್ಯಕ್ರಮದಲ್ಲಿ ವಿಷಯ ಮಂಡನೆ ನಡೆಸಿ ಮಾತನಾಡಿದರು. ವಿವಿಧ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಮುಸ್ಲಿಂ ನಾಯಕರು ಸಮುದಾಯದ ವಿಚಾರ ಬಂದಾಗ ಒಗ್ಗಟ್ಟನ್ನು ಪ್ರದರ್ಶಿಸಬೇಕೆಂದರು.
ಕರ್ನಾಟಕ ಮುಸ್ಲಿಂ ಜಮಾಅತ್ ದಾವಣಗೆರೆ ಜಿಲ್ಲಾ ಸಮಿತಿ ರಚನೆಯು ಇಂದು ನಗರದ ರಾಜಮಹಲ್ ಸಭಾಂಗಣದಲ್ಲಿ ನಡೆಯಿತು.

ಸಭೆಯನ್ನು ಕರ್ನಾಟಕ ಮುಸ್ಲಿಂ ಜಮಾತ್ ರಾಜ್ಯ ಉಪಾಧ್ಯಕ್ಷರು ಅಬೂಸುಫಿಯಾನ್ ಮದನಿ ಉದ್ಘಾಟಿಸಿದರು. ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಯೋಜನಾ ಸಮಿತಿ ಅಧ್ಯಕ್ಷರಾದ ಹಮೀದ್ ಬಜ್ಪೆ ಕರ್ನಾಟಕ ಮುಸ್ಲಿಂ ಜಮಾತ್ ನ ಯೋಜನೆಯನ್ನು ವಿವರಿಸಿದರು.


ಈ ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಸಯ್ಯಿದ್ ಸೈಪುಲ್ಲಾ ಸಾಬ್, ಚಮ್ಮಾನ್ ಸಾಬ್ ಕಾರ್ಯದರ್ಶಿ ಯಕುಬ್ ಯೂಸುಫ್ ಹೊಸ ನಗರ, ನಾಯಕರಾದ ಅಶ್ರಫ್ ಕಿನಾರ ಮಂಗಳೂರು, ಫಾರೂಕ್ ಪಾಷ ಬೆಂಗಳೂರು, SSF ನಾಯಕರಾದ ಕೆ ಕೆ ಸಖಾಫಿ , ಜುನೈದ್ ಸಖಾಫಿ ಉಪಸ್ಥಿತರಿದ್ದರು.
ಕರ್ನಾಟಕ ಮುಸ್ಲಿಂ ಜಮಾತ್ ದಾವಣಗೆರೆ ಜಿಲ್ಲಾ ನೂತನ ಜಿಲ್ಲಾ ಸಮಿತಿಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಫಿ ಸಅದಿ ಘೋಷಿಸಿದರು.
ಅಧ್ಯಕ್ಷರಾಗಿ ಜೆ ಅಮಾನುಲ್ಲಾ ಖಾನ್, ಪ್ರಧಾನ ಕಾರ್ಯದರ್ಶಿಯಾಗಿ ಸಯೀದ್ ಚಾರ್ಲಿ, ಹಾಗು ಕೋಶಾಧಿಕಾರಿಯಾಗಿ ಹಕ್ಕಾನಿ ಅತಾವುಲ್ಲಾ ಸಾಬ್ ಅವರನ್ನು ಹಾಗೂ ಇನ್ನಿತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರನ್ನು ಆರಿಸಲಾಯಿತು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್