ಅಜ್ಮಾನ್: ಕರ್ನಾಟಕ ಕಲ್ಚರಲ್ ಫೌಂಡೇಷನ್ ಅಜ್ಮಾನ್ ಝೋನ್ ಯುಎಇ ವತಿಯಿಂದ ನವೆಂಬರ್ 15 ರಂದು ಕ್ರೌನ್ ಪ್ಯಾಲೆಸ್ ಹೋಟೆಲ್ ಅಜ್ಮಾನ್ ಸಭಾಂಗಣದಲ್ಲಿ ನಡೆಯಲಿರುವ ಬೃಹತ್ ಈದ್ ಮಿಲಾದ್ ಕಾನ್ಫರೆನ್ಸ್-2019 ಗೆ ನೂತನ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಸ್ವಾಗತ ಸಮಿತಿ ಅಧ್ಯಕ್ಷರಾಗಿ ಅಬೂಬಕ್ಕರ್ ಮದನಿ ಕೆಮ್ಮಾರಅಜ್ಮಾನ್, ಉಪಾಧ್ಯಕ್ಷರಾಗಿ ಅನ್ವರ್ ಹುಸೈನ್ ಉಳ್ಳಾಲ ಹಾಗೂ ಜನರಲ್ ಕನ್ವೀನರ್ ಆಗಿ ಅಬೂಬಕ್ಕರ್ ಸಿದ್ದೀಕ್ ಪಾಣೆಮಂಗಳೂರು ಮತ್ತು ಜೊತೆ ಕನ್ವೀನರಾಗಿ ಅಬ್ದುಲ್ ಖಾದರ್ ಕೊಡಿಪ್ಪಾಡಿ, ಕೋಶಾಧಿಕಾರಿಯಾಗಿ ಆದಂ ಈಶ್ವರಮಂಗಿಲ ಆಯ್ಕೆಯಾದರು.
ಪ್ರತಿಭೋತ್ಸವ ಸಮಿತಿ ಅಧ್ಯಕ್ಷರಾಗಿ ಮುಜೀಬ್ ಸಅದಿ ಹಾಗೂ ಕನ್ವೀನರ್ ಆಗಿ ನಿಝಾಮುದ್ದೀನ್ ಮದನಿ ಉರುವಾಲು ಪದವುರವರನ್ನು ಆಯ್ಕೆ ಮಾಡಲಾಯಿತು. ಆರ್ಥಿಕ ನಿರ್ವಹಣಾ ಸಮಿತಿ ಅಧ್ಯಕ್ಷರಾಗಿ ಅಲ್ ಸರೋಜ್ ಗಾರ್ಮೆಂಟ್ಸ್ ಮಾಲಕ ಹಸನ್ ಕಂಬಳಬೆಟ್ಟು ಕನ್ವೀನರ್ ಆಗಿ ನೌಶೀಫ್ ಉಳ್ಳಾಲರವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದ ಯಶಸ್ವೀ ನಿರ್ವಹಣೆಗಾಗಿ ಸಾರಿಗೆ ವ್ಯವಸ್ಥೆ, ವೇದಿಕೆ ನಿರ್ವಹಣಾ ಸಮಿತಿ, ಪ್ರಚಾರ ನಿರ್ವಹಣಾ ಸಮಿತಿ, ಆಹಾರ ಪಾನೀಯ ನಿರ್ವಹಣಾ ಸಮಿತಿ, ಫ್ಯಾಮಿಲಿ ಸೆಮಿನಾರ್ ಸಮಿತಿ, ಸ್ವಯಂ ಸೇವಕ ಸಮಿತಿ ಹೀಗೆ ಉಪಸಮಿತಿಗಳನ್ನಾಗಿ ರಚಿಸಿ ಹದಿನೇಳು ಸದಸ್ಯರನ್ನು ಆಯ್ಕೆ ಮಾಡಲಾಯಿತು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ