ಮೈಸೂರು : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಸಕ್ರೀಯ ಕಾರ್ಯಕರ್ತರ ತಂಡ Qteam ಇದರ ಮೈಸೂರು ಜಿಲ್ಲಾ ಮಟ್ಟದ ಝಾಕ್ವಿಕ್ ಕಾರ್ಯಕ್ರಮ ಮೈಸೂರು ಶಾಂತಿನಗರದ ಅಲ್ ನೂರ್ ನಲ್ಲಿ ನಡೆಯಿತು.
ಮೈಸೂರು, ಹುನಸೂರು, ಕೆ.ಆರ್ ನಗರದಿಂದ ಕ್ಯು ಟೀಂ ಸದಸ್ಯರು ಭಾಗವಹಿಸಿದ್ದರು. ಎಸ್ಸೆಸ್ಸೆಫ್ ಮೈಸೂರು ಜಿಲ್ಲಾ ಅಧ್ಯಕ್ಷ ಮೌಲಾನಾ ಫಾರೂಖ್ ಸುಬ್ಹಾನಿ ಅಧ್ಯಕ್ಷತೆ ವಹಿಸಿದ್ದರು.ಮೈಸೂರು ಅಲ್ ನೂರ್ ಸಾರಥಿ ಹಾಜಿ ಅಬ್ದುಲ್ ಖಾದರ್ ಕಾರ್ಯಕ್ರಮ ಉದ್ಘಾಟಿಸಿದರು.


ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಮಂಗಳೂರು ಸಂಘಟನೆ ನಾಡಿಗೆ ನೀಡಿದ ಕೊಡುಗೆ ಹಾಗೂ ಯುವಜನತೆಯಲ್ಲಿ ಉಂಟು ಮಾಡಿದ ಪರಿವರ್ತನೆಯ ಬಗ್ಗೆ ಮಾಹಿತಿ ನೀಡಿ ಕ್ಯು ಟೀಂ ಮೂಲಕ ರಾಜ್ಯದಾದ್ಯಂತ ಸಂಘಟನೆಯನ್ನು ಬಲಿಷ್ಠ ಗೊಳಿಸುವ ಬಗ್ಗೆ ವಿವರಿಸಿದರು. ಎಸ್ಸೆಸ್ಸೆಫ್ ರಾಜ್ಯ ನಾಯಕ ನವಾಝ್ ಭಟ್ಕಳ್, ಅಬೂಬಕ್ಕರ್ ಅಝ್ಹರಿ ಹುಣಸೂರು, ಅಮೀನ್ ಮಿಸ್ಬಾಹಿ ಕೆ.ಆರ್ ನಗರ, ಶಿಹಾಬ್ ಸಖಾಫಿ ಮೈಸೂರು, ಅಬ್ದುಲ್ ಅಝೀಝ್ ಮಿಸ್ಬಾಹಿ, ಸಫ್ವಾನ್ ನೂರಾನಿ, ಮುಂತಾದವರು ಭಾಗವಹಿಸಿದ್ದರು.
ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಮದನಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ