ನವದೆಹಲಿ ,ಸೆ.29: ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ದೇವರಲ್ಲ. ಎಲ್ಲ ಪ್ರಕರಣವನ್ನು ಅವರೇ ತನಿಖೆ ಮಾಡಬೇಕೆಂದೇನೂ ಇಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದೆ.
ಸಣ್ಣ ಪ್ರಕರಣವೊಂದನ್ನು ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ಸ್ಥಳೀಯ ಪೊಲೀಸರಿಂದ ಸಿಬಿಐಗೆ ಹಸ್ತಾಂತರ ಮಾಡಿತ್ತು. ಈ ವಿಚಾರವನ್ನು ಸಿಬಿಐ ಪ್ರಶ್ನೆ ಮಾಡಿತ್ತು. ಈ ವೇಳೆ ನ್ಯಾಯಮೂರ್ತಿ ಎನ್ವಿ ರಮಣ ಹಾಗೂ ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠ ಈ ರೀತಿ ಅಭಿಪ್ರಾಯ ಪಟ್ಟಿದೆ.
2012ರಲ್ಲಿ ಪಂಜಾಬ್ನ ವ್ಯಕ್ತಿಯೋರ್ವ ಕಾಣೆಯಾಗಿದ್ದ. ಈತನ ಸಹೋದರ ಶಿಂಬಿರ್ಸಿಂಗ್ ಈ ಬಗ್ಗೆ ಪಂಜಾಬ್-ಹರಿಯಾಣ ಹೈಕೋರ್ಟ್ಗೆ ದೂರು ನೀಡಿದ್ದ. “ನನ್ನ ತಂದೆಯಿಂದ ಕೆಲವರು ಜಾಗ ಕೊಂಡುಕೊಂಡಿದ್ದರು. ಅವರು ಹಣ ಪಡೆಯಲು ನನ್ನ ಸಹೋದರ ತೆರಳಿದ್ದ. ಅದಾದ ನಂತರದಲ್ಲಿ ಅವನು ಕಾಣೆಯಾಗಿದ್ದ. ಪ್ರಕರಣವನ್ನು ಸಿಬಿಐಗೆ ವಹಿಸಿ,” ಎಂದು ಆತ ಕೋರಿದ್ದ.
ಹೀಗಾಗಿ ಪ್ರಕರಣವನ್ನು ಹೈಕೋರ್ಟ್ ಸ್ಥಳೀಯ ಪೊಲೀಸರಿಂದ ಸಿಬಿಐಗೆ ಹಸ್ತಾಂತರ ಮಾಡಿತ್ತು. ಈ.ಆದೇಶವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿದ್ದ ಸಿಬಿಐ, “ಈ ಕೇಸ್ಅನ್ನು ನಮಗೆ ವಹಿಸಿದ್ದೇಕೆ ಎಂಬುದೇ ತಿಳಿಯುತ್ತಿಲ್ಲ,” ಎಂದಿತ್ತು. ಈಗ ಕೋರ್ಟ್ ಸಿಬಿಐ ಪರವಾಗಿ ತೀರ್ಪು ನೀಡಿದೆ. “ಸಿಬಿಐ ದೇವರಲ್ಲ. ಅವರಿಗೆ ಎಲ್ಲವೂ ಗೊತ್ತಿರಲೇಬೇಕೆಂದೇನು ಇಲ್ಲ. ಕೆಲವೊಮ್ಮೆ ಎಲ್ಲ ಪ್ರಕರಣವನ್ನು ಅವರಿಂದ ಬೇಧಿಸಲು ಸಾಧ್ಯವಾಗದು,” ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ