ವಿಟ್ಲ: ಕನ್ಯಾನ ಪೇಟೆಯಿಂದ ಕೆಳಗಿನ ಪೇಟೆಯವರೆಗೆ ಗಾಂಧಿ ಜಯಂತಿ ಪ್ರಯುಕ್ತ ಮಾದಕ ದ್ರವ್ಯ ವಿರುಧ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ನಂತರ ಭಾಷಣ ಮಾಡಿದ Q ಟೀಂ SSF ವಿಟ್ಲ ಡಿವಿಝನ್ ಕಂಟ್ರೋಲರ್ ಕೆ.ಎಂ ಅಶ್ರಫ್ ಸಖಾಫಿ ಕನ್ಯಾನ ‘ಗಾಂಧೀಜಿಯ ಕನಸಿನ ಭಾರತ ಸಾಕ್ಷಾತ್ಕಾರಗೊಳ್ಳಬೇಕು,ಭವಿಷ್ಯಕ್ಕೆ ಮಾರಕವಾದ ಮಾಧಕ ವಸ್ತುಗಳನ್ನು ನಿಲ್ಲಿಸಿಬೇಕು.ಪ್ರತ್ಯೇಕವಾಗಿ ಶಾಲಾ ಕಾಲೇಜ್ ಪರಿಸರಗಳಲ್ಲಿ ಮಾರಾಟವಾಗಬಾರದು.

ನಮ್ಮರಾಷ್ಟ್ರ ,ರಾಜ್ಯ ನಾಡು ಪರಿಸರ ಮಾದಕ ದೃವ್ಯ ಮುಕ್ತವಾಗಬೇಕಿದೆ,ಅದೆಷ್ಟೋ ಜನರನ್ನು ರೋಗದ ವಿಕೋಪಕ್ಕೆ ತಲ್ಲಿ ಲಾಭಪಡುವ ಲಹರಿ ಪಧಾರ್ಥಗಳ ಹಣದ ಅವಶ್ಯಕತೆ ಯಾವ ರಾಜ್ಯಕ್ಕೂ ಬೇಕಾಗಿಲ್ಲ. SSF ರಾಜ್ಯಾದ್ಯಂತ ಕರೆ ಕೊಟ್ಟಿರುವ ಈ ಹೋರಾಟ ಇನ್ನೂ ಮುಂದುವರಿಯಲಿದೆ ಎಂದು ಕರೆ ನೀಡಿದರು.
ಕಾರ್ಯಕ್ರಮಕ್ಕೆ ಸೆಕ್ಟರ್ ಅಧ್ಯಕ್ಷರಾದ ಎಂ ಐ ಎಂ ಅಶ್ರಫ್ ಸಖಾಫಿ ಪ್ರಾರ್ಥನಾ ಮೂಲಕ ಚಾಲನೆ ನೀಡಿದರು.ನೂರಕ್ಕೂ ಮಿಕ್ಕ ಸದಸ್ಯರೂ ,ಕಾಲೇಜು ಕ್ಯಾಂಪಸ್ ವಿಧ್ಯಾರ್ಥಿಗಳು ಜಾಥೆಗೆ ಮೆರುಗು ನೀಡಿದರು.
ಕನ್ಯಾನ ಸೆಕ್ಟರ್ ಇಶಾರ ಕನ್ವೀನರ್ ಕಾದರ್ ಸ ಅದಿ , ಸೆಕ್ಟರ್ ಪ್ರಧಾನ ಕಾರ್ಯದರ್ಶಿ ರಝಾಖ್ ಬೈರಿಕಟ್ಟೆ, SMA ಈಷ್ಟ್ ವಿಭಾಗ ಜಿಲ್ಲಾ ಸದಸ್ಯ ಡಿ ಕೆ ಇಬ್ರಾಹಿಂ ಶಾ, SYS ಕನ್ಯಾನ ಬ್ರಾಂಚ್ ಅಧ್ಯಕ್ಷ ಇಸ್ಮಾಯೀಲ್ ಪೊಯ್ಯಕಂಡ, SMA ಕನ್ಯಾನ ರೀಜಿನಲ್ ಸಮಿತಿ ಅಧ್ಯಕ್ಷ ಮೂಸಬ್ಬ ಕಳಾಯಿ , ಕೋಶಾಧಿಕಾರಿ ಹುಸೈನಾರ್ ಹಾಜಿ ಪೊಯ್ಯಕಂಡ, ಕಾರ್ಯದರ್ಶಿ ಸಿದ್ದೀಖ್ ಪೊಯ್ಯಕಂಡ, ಕೆ ಸಿ ಎಫ್ ಸದಸ್ಯರಾದ ಅಬ್ದುಲ್ ಮಾಲಿಕ್ ಅಮಾನಿ, ತೌಸೀಫ್ ಕನ್ಯಾನ, ಅಬ್ದುಲ್ ಖಾದರ್ ಮರ್ತನಾಡಿ ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ