ರಿಯಾದ್: ಅಪಘತಕ್ಕೀಡಾಗಿ ತುಂಬಾ ತೊಂದರೆಗೆ ಸಿಲುಕಿದ್ದ, ಸೌದಿ ಅರೇಬಿಯಾದ ಖಮೀಸ್ ಮುಶಾಯ್ತ್ ನಲ್ಲಿ ಕೆಲಸ ಮಾಡುತ್ತಿದ್ದ ಕರ್ನಾಟಕದ ಮಹ್ಬೂಬ್ ಪಾಷಾ ಎಂಬವರನ್ನು ಕೆಸಿಎಫ್ ನೆರವಿನಿಂದ ತಾಯಿನಾಡಿಗೆ ಕಳಿಸಲಾಯಿತು.
ತನ್ನ ಸ್ಪೊನ್ಸರ್ ಹುರೂಬ್ ಮಾಡಿ, ಪಾಸಪೋರ್ಟ್, ಇಖಾಮ ಇನ್ನಿತರ ಯಾವುದೇ ದಾಖಲೆ ಪತ್ರಗಳಿಲ್ಲದೆ ಅನಧಿಕೃತವಾಗಿ ವಾಸವಾಗಿದ್ದ ಇವರು ಸೈಕಲ್ನಲ್ಲಿ ಸಮೋಸ ಮಾರಿ ದೊರೆಯುತ್ತಿದ್ದ ಹಣದಿಂದ ಜೀವನ ನಡೆಸುತ್ತಿದ್ದರು.ಆದರೆ ದುರ್ವಿಧಿ ಎಂಬಂತೆ ಅವರ ಸೈಕಲ್ಗೆ ಕಾರು ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿದ ಅವರಿಗೆ ಸಹಾಯಕ್ಕಾಗಿ ಯಾವುದೇ ಬಂದು ಮಿತ್ರರಿಲ್ಲದೆ ಏಕಾಂಗಿಯಾಗಿ ಸಂಕಷ್ಟದಲ್ಲಿದ್ದರು.
ಅತ್ತ ಕೆಲಸ ಮಾಡಲಾಗದೆ ಇತ್ತ ಊರಿಗೂ ಹೋಗಲಾರದೆ ಮಾನಸಿಕವಾಗಿ ನೊಂದು ಆಸ್ಪತ್ರೆಯಲ್ಲಿದ್ದ ಅವರನ್ನು ಭೇಟಿಯಾದ ಕೆಸಿಎಫ್ ಖಮೀಸ್ ಮುಶಾಯ್ತ್ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬನ್ನೂರು ಅವರು ಭಾರತೀಯ ರಾಯಭಾರ ಕಛೇರಿ ಹಾಗೂ ಸೌದಿ ಪೊಲೀಸ್ ಅಧಿಕಾರಿಯನ್ನು ಭೇಟಿಯಾಗಿ ಅವರಿಗೆ ಊರಿಗೆ ಹೋಗಲು ಅಗತ್ಯವಿದ್ದ ತಾತ್ಕಾಲಿಕ ಪಾಸ್ಪೋರ್ಟ್ ಸಹಿತ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಟಿಕೆಟ್ ವ್ಯವಸ್ಥೆಯನ್ನು ಕೂಡ ಮಾಡಿ ಅವರನ್ನು ಅಬಹ ಏರ್ಪೋರ್ಟ್ ತಲುಪಿಸಿ ಸುರಕ್ಷಿತವಾಗಿ ಯಾವುದೇ ಅಡೆತಡೆಗಳಿಲ್ಲದೆ ಊರಿಗೆ ತಲುಪುವಂತೆ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು