ಕಾಪು: ಹಿಂದಿನ ನಾಯಕರ ಅನುಭವವನ್ನು ಹೊಸ ತಲೆಮಾರುಗಳಿಗೆ ಪರಿಚಯಿಸುವ ಉದ್ದೇಶದಿಂದ ಎಸ್ಸೆಸ್ಸೆಫ್ ಕಾಪು ಡಿವಿಷನ್ ಸಮಿತಿಯು ಹಳೆ ಬೇರು ಹೊಸ ಚಿಗುರು ಕಾರ್ಯಕ್ರಮ ವನ್ನು ಅಕ್ಟೋಬರ್19 ರಂದು ಶನಿವಾರ ಸಂಜೆ 7 ಗಂಟೆಗೆ ಸರಿಯಾಗಿ ಕಾಪು ಜೇಸೀ ಭವನದಲ್ಲಿ ಡಿವಿಷನ್ ಅಧ್ಯಕ್ಷರಾದ ಶಾಹುಲ್ ಹಮೀದ್ ನ ಈಮಿ ಯವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಧ್ಯಕ್ಷರಾದ ಅಹ್ಮದ್ ಶಬೀರ್ ಸಖಾಫಿ ಉದ್ಘಾಟಿಸುವರು. ಉಡುಪಿ ಜಿಲ್ಲಾ ಮುಸ್ಲಿಂ ಜಮಾತ್ ಕಾರ್ಯದರ್ಶಿ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ರವರು ಮುಖ್ಯ ಭಾಷಣ ಮಾಡಲಿರುವರು. ಸಂದೇಶ ಭಾಷಣವನ್ನು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಯಾದ ಅಶ್ರಫ್ ರಝಾ ಅಂಜದಿ ನಡೆಸಲಿದ್ದಾರೆ.
ಸಂಘ ಕುಟುಂಬದ ಹಿರಿಯ ಅನುಭವಿ 25 ನಾಯಕರುಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮ ದಲ್ಲಿ ಜಿಲ್ಲಾ ನಾಯಕರಾದ ಮುಹ್ಯಿದ್ದೀನ್ ಸಖಾಫಿ ಪಯ್ಯಾರ್, ಮಜೀದ್ ಹನೀಫಿ, ಸಲೀಂ ಪಕೀರ್ಣಕಟ್ಟೆ, ಇಬ್ರಾಹಿಂ ಮಜೂರ್ ಹಾಗೂ ಡಿವಿಷನ್ ಉಪಾಧ್ಯಕ್ಷ ಮುಹಮ್ಮದ್ ಮುಸ್ತಫ ಸಖಫಿ ಉಪಸ್ಥಿತಿಯಿರುವರು ಎಂದು ಎಸ್ಸೆಸ್ಸೆಫ್ ಕಾಪು ಡಿವಿಷನ್ ಪ್ರ.ಕಾರ್ಯದರ್ಶಿ ಮುಹಮ್ಮದ್ ಸಮೀರ್ ಕೋಡಿ ಪ್ರಕಟಣೆ ತಿಳಿಸಿರುತ್ತಾರೆ.
ವರದಿ : ಪಿ.ಎಂ.ಎಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ