ಚಿಕ್ಕಮಗಳೂರು:ಎಸ್ಸೆಸ್ಸೆಫ್ ರಾಜ್ಯ ಪ್ರತಿಭೋತ್ಸವ ಸಮಿತಿಯಿಂದ ಪ್ರತಿಭೋತ್ಸವ ಮಾಹಿತಿ ಕಾರ್ಯಾಗಾರವು ಎಸ್ಸೆಸ್ಸೆಫ್ ರಾಜ್ಯ ಪ್ರತಿಭೋತ್ಸವ ಚಯರ್ ಮ್ಯಾನ್ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನರವರ ಅಧ್ಯಕ್ಷತೆಯಲ್ಲಿ ಬದ್ರಿಯಾ ಚಿಕ್ಕಮಗಳೂರುನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸ ಅದಿ ನಾವೂರುರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಜ್ಯ ಪ್ರತಿಭೋತ್ಸವ ಸಮಿತಿ ಕನ್ವೀನರ್ ಮುಸ್ತಫಾ ನಯೀಮಿ ಮೋಂಟುಗೋಳಿ ಪ್ರತಿಭೋತ್ಸವ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಬದ್ರಿಯಾ ಜುಮಾ ಮಸ್ಜಿದ್ ಅಧ್ಯಕ್ಷ ಅಝೀಝ್ ಚಿಕ್ಕಮಗಳೂರು,ಎಸ್ಸೆಸ್ಸೆಫ್ ಚಿಕ್ಕಮಗಳೂರು ,ಖತೀಬರಾದ ಶರೀಫ್ ಸಖಾಫಿ, ಜಿಲ್ಲಾಧ್ಯಕ್ಷ ಸಫ್ವಾನ್ ಸಖಾಫಿ,ಎಸ್ಸೆಸ್ಸೆಫ್ ಮಾಜಿ ನಾಯಕರಾದ ಉಸ್ಮಾನ್ ಹಂಡುಗುಳಿ,ಮುನೀರ್ ಚಿಕ್ಕಮಗಳೂರು,ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿ ಶಾಹಿನ್ ಚಿಕ್ಕಮಗಳೂರು ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿ,ಕೊನೆಗೆ ವಂದಿಸಿದರು.






