ಸೌದಿ ಅರೇಬಿಯಾ: ಕರ್ನಾಟಕದ ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಖಮೀಸ್ ಮುಶೈತ್ ಸೆಕ್ಟರ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಇಶಾರ ಮೀಟ್ ಕಾರ್ಯಕ್ರಮ ನವೆಂಬರ್ 1 ರಂದು ಬೆಳಿಗ್ಗೆ ನಡೆಯಿತು.

ಕಾರ್ಯಕ್ರಮದಲ್ಲಿ ಸೆಕ್ಟರ್ ಕಾರ್ಯದರ್ಶಿ ಅಬ್ದುಲ್ ರಝಾಕ್ ಸಾಲೆತ್ತೂರು ಸ್ವಾಗತವನ್ನು ಕೋರಿದರು. ನಂತರ ಸೆಕ್ಟರ್ ಅಧ್ಯಕ್ಷರಾದ ಅಬ್ದಲ್ ರಝಾಕ್ ಬನ್ನೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸೆಕ್ಟರ್ ನೇತಾರರಾದ ಅಬೂಬಕರ್ ಪುರುಷರಕಟ್ಟೆ ಅವರು ಕನ್ನಡ ಕವನ ವಾಚನ ನಡೆಸಿದರು ಹಾಗೂ ಸೆಕ್ಟರ್ ಶಿಕ್ಷಣ ವಿಭಾಗದ ಕಾರ್ಯದರ್ಶಿ ಅನ್ವರ್ ಕಕ್ಕೆಪದವು ಅವರು ಕರ್ನಾಟಕದ ಏಕೀಕರಣದ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ನಂತರ ಶರೀಫ್ ಉಸ್ತಾದ್ ವಿಟ್ಲ ಅವರು ಕರ್ನಾಟಕ ರಾಜ್ಯೋತ್ಸವದ ಸಂದೇಶ ಭಾಷಣ ಮಾಡಿದರು.

ಈ ವರ್ಷದ ಗಲ್ಫ್ ಇಶಾರ ಅಭಿಯಾನವನ್ನು ಸೆಕ್ಟರ್ ಅಧ್ಯಕ್ಷರು ಖಮೀಸ್ ಸೆಕ್ಟರ್ ಅಧೀನದಲ್ಲಿರುವ ತಂದಹಾ ಯುನಿಟ್ ಅಧ್ಯಕ್ಷರಾದ ಮುಹಮ್ಮದ್ ಮಂಜನಾಡಿ ಅವರಿಗೆ ಇಶಾರ ನೀಡುವ ಮೂಲಕ ಚಾಲನೆ ನೀಡಲಾಯಿತು.
ವರದಿ:ಅಬ್ದುಲ್ ರಝಾಕ್ ಸಾಲೆತ್ತೂರು
(ಕಾರ್ಯದರ್ಶಿ ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ )















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ