ಸೌದಿ ಅರೇಬಿಯಾ: ಕರ್ನಾಟಕದ ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಖಮೀಸ್ ಮುಶೈತ್ ಸೆಕ್ಟರ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಇಶಾರ ಮೀಟ್ ಕಾರ್ಯಕ್ರಮ ನವೆಂಬರ್ 1 ರಂದು ಬೆಳಿಗ್ಗೆ ನಡೆಯಿತು.

ಕಾರ್ಯಕ್ರಮದಲ್ಲಿ ಸೆಕ್ಟರ್ ಕಾರ್ಯದರ್ಶಿ ಅಬ್ದುಲ್ ರಝಾಕ್ ಸಾಲೆತ್ತೂರು ಸ್ವಾಗತವನ್ನು ಕೋರಿದರು. ನಂತರ ಸೆಕ್ಟರ್ ಅಧ್ಯಕ್ಷರಾದ ಅಬ್ದಲ್ ರಝಾಕ್ ಬನ್ನೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸೆಕ್ಟರ್ ನೇತಾರರಾದ ಅಬೂಬಕರ್ ಪುರುಷರಕಟ್ಟೆ ಅವರು ಕನ್ನಡ ಕವನ ವಾಚನ ನಡೆಸಿದರು ಹಾಗೂ ಸೆಕ್ಟರ್ ಶಿಕ್ಷಣ ವಿಭಾಗದ ಕಾರ್ಯದರ್ಶಿ ಅನ್ವರ್ ಕಕ್ಕೆಪದವು ಅವರು ಕರ್ನಾಟಕದ ಏಕೀಕರಣದ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ನಂತರ ಶರೀಫ್ ಉಸ್ತಾದ್ ವಿಟ್ಲ ಅವರು ಕರ್ನಾಟಕ ರಾಜ್ಯೋತ್ಸವದ ಸಂದೇಶ ಭಾಷಣ ಮಾಡಿದರು.

ಈ ವರ್ಷದ ಗಲ್ಫ್ ಇಶಾರ ಅಭಿಯಾನವನ್ನು ಸೆಕ್ಟರ್ ಅಧ್ಯಕ್ಷರು ಖಮೀಸ್ ಸೆಕ್ಟರ್ ಅಧೀನದಲ್ಲಿರುವ ತಂದಹಾ ಯುನಿಟ್ ಅಧ್ಯಕ್ಷರಾದ ಮುಹಮ್ಮದ್ ಮಂಜನಾಡಿ ಅವರಿಗೆ ಇಶಾರ ನೀಡುವ ಮೂಲಕ ಚಾಲನೆ ನೀಡಲಾಯಿತು.
ವರದಿ:ಅಬ್ದುಲ್ ರಝಾಕ್ ಸಾಲೆತ್ತೂರು
(ಕಾರ್ಯದರ್ಶಿ ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ )















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ