janadhvani

Kannada Online News Paper

ಕೆ.ಸಿ.ಎಫ್ ಶಾರ್ಜಾ ಝೋನ್: ಕರ್ನಾಟಕ ರಾಜ್ಯೋತ್ಸವ ಆಚರಣೆ

ಶಾರ್ಜಾ: ಕೆ.ಸಿ.ಎಫ್ ಶಾರ್ಜಾ ಝೋನ್ ವತಿಯಿಂದ ದಿನಾಂಕ 1-11-19 ರಂದು ಶುಕ್ರವಾರ ಸಂಜೆ 5.30 ಗಂಟೆಗೆ ಶಾರ್ಜಾದ ಅಲ್ ಖಾಸಿಮಿಯಾದಲ್ಲಿರುವ ರಯಾನ್ ಹೋಟೆಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವು ಬಹಳ ವಿಜಂಭ್ರಣೆಯಿಂದ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಲಯ ಅಧ್ಯಕ್ಷ ಬಹು! ಅಬೂಸ್ವಾಲಿಹ್ ಸಖಾಫಿಯವರು ವಹಿಸಿ ಝೋನ್ ಪ್ರಧಾನ ಕಾರ್ಯದರ್ಶಿ ಬಹು! ರಜಬ್ ಮುಹಮ್ಮದ್ ಉಚ್ಚಿಲರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಕೋರಿದರು. ಆಡಳಿತ ವಿಭಾಗದ ಕಾರ್ಯದರ್ಶಿ ಬಹು! ತಾಜುದ್ದೀನ್ ಅಮ್ಮುಂಜೆರವರು ಸಭೆಗೆ ಮತ್ತು ಅತಿಥಿಗಳಿಗೆ ಸ್ವಾಗತ ಕೋರಿದರು.

ಮುಖ್ಯ ಅತಿಥಿ ಆಗಿ ಮುಹಮ್ಮದ್ ಅಫ್ಝಲ್ ಉದ್ಯಾವರ ಅವರು ಆಗಮಿಸಿದ್ದರು. ಕೆ.ಸಿ.ಎಫ್ ಶಾರ್ಜ ವಲಯದ ಆಡಳಿತ ವಿಭಾಗದ ಅಧ್ಯಕ್ಷರಾದ ಅಬ್ದುಲ್ಲಾ ಕುಂಞ್ಞ ಪೆರುವಾಯಿಯವರು ಮುಖ್ಯ ಪ್ರಭಾಷಣಗೈಯುತ್ತಾ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ ಎಂದು ವಿವರಿಸಿದರು. ಸಭೆಯಲ್ಲಿ ಶಾರ್ಜಾ ವಲಯದ ಗಣ್ಯವ್ಯಕ್ತಿಗಳು ಹಾಜರಿದ್ದರು. ಕೊನೆಯಲ್ಲಿ ಧನ್ಯವಾದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.