ಮದೀನಾ ಮುನವ್ವರ: ಇಸ್ಮಾಯಿಲ್ ಸಅದಿ ಮಾಚಾರ್ ಅವರು ಬರೆದ ಖಸೀದತುಲ್ ಬುರ್ದಾ ಕನ್ನಡಾನುವಾದ ಭಾಗ 2 ಮದೀನಾ ಮುನವ್ವರದಲ್ಲಿ ಲೋಕಾರ್ಪಣೆಗೊಂಡಿತು.
ಅಲ್ ಖಾದಿಸೀಯ ಎಜುಕೇಶನ್ ಅಕಾಡಮಿ ಕಾವಳಕಟ್ಟೆ ಸಾರಥಿ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ಅವರು, ಪೇರೋಡ್ ಉಸ್ತಾದ್ ಅವರ ಪುತ್ರ ಮುಹಮ್ಮದ್ ಅಝ್ಹರಿಯವರಿಗೆ ಖಸೀದತುಲ್ ಬುರ್ದಾ ಪುಸ್ತಕ ನೀಡುವ ಮೂಲಕ ಬಿಡುಗೊಳಿಸಿದರು. ನಂತರ ಮಾತನಾಡಿದ ಹಝ್ರತ್ ಅವರು ಕಳೆದ ಬಾರಿ ಖಸೀದತುಲ್ ಬುರ್ದಾದ ಭಾಗ ಒಂದನ್ನು ಬಿಡುಗೊಳಿಸಿಲಾಗಿದ್ದು, ಈ ಬಾರಿ ಅದರ ಎರಡನೇ ಆವೃತ್ತಿ ಯನ್ನು ಬಿಡುಗಡೆಗೊಳಿಸಿ, ಸಂಪೂರ್ಣಗೊಳಿಸಿದ್ದಾರೆ ಎಂದು ಶುಭ ಹಾರೈಸಿದರು.

ಈ ವೇಳೆ ಇಸ್ಮಾಯಿಲ್ ಸಅದಿ ಮಾಚಾರ್ ಮಾತನಾಡಿ, ಖಸೀದತುಲ್ ಬುರ್ದಾ ಕನ್ನಡಾನುವಾದದ ಎರಡು ಭಾಗವು ಕೂಡ ಪವಿತ್ರ ಮದೀನಾದಲ್ಲಿ ಬಿಡುಗಡೆಗೊಳಿಸಲಾಗಿದೆ. ಈ ಪುಸ್ತಕವು ಪ್ರವಾದಿ ಸ್ವಲ್ಲಲ್ಲಾಹು ಅಲೈಹಿವಸಲ್ಲಂ ಅವರನ್ನು ಇನ್ನಷ್ಟು ಪ್ರೀತಿಸಲು ಕಾರಣವಾಗಲಿ ಎಂದ ಅವರು, ಈ ಪುಸ್ತಕ ರಚನೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ತಿಳಿಸಿದರು.
ಎಸ್.ವೈ.ಎಸ್ ದ.ಕ. ಜಿಲ್ಲಾಧ್ಯಕ್ಷ ಉಸ್ಮಾನ್ ಸಅದಿ ಪಟೋರಿ, ದಾರುಲ್ ಇರ್ಷಾದ್ ಮದೀನಾ ಎಜುಕೇಶನ್ ಮಾಣಿ ಇದರ ಮದೀನಾ ಘಟಕದ ಆರ್ಗನೈಸರ್ ಉಮ್ಮರ್ ಕಾಮಿಲ್ ಸಖಾಫಿ ಪರಪ್ಪು, ಅಬೂಬಕರ್ ಹಾಜಿ ರೈಸ್ಕೋ, ತಾಜುದ್ದೀನ್ ಸುಳ್ಯ, ನಝೀರ್ ಹಾಜಿ ದುಬೈ, ಅಲ್ ಹಾಜ್ ಸಲೀಂ ಮದನಿ, ಅಶ್ರಫ್ ಅಮ್ಜದಿ, ಝೈನುದ್ದೀನ್ ಪಕ್ಷಿಕೆರೆ, ಅಶ್ರಫ್ ಸಖಾಫಿ ನೂಜಿ, ಮತ್ತಿತರರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ