ನುಸ್ರತುಲ್ ಇಸ್ಲಾಮ್ ಎಸೋಸಿಯೇಶನ್ ರಿ ಎಲಿಮಲೆ ಇದರ ಆಶ್ರಯದಲ್ಲಿ ಶಾಂತಿ ದೂತ ವಿಶ್ವ ಪ್ರವಾದಿ ಮುಹಮ್ಮದ್ ಪೈಗಂಬರ್ ಸಲ್ಲಲ್ಲಾಹು ಅಲೈಹಿವ ಸಲ್ಲಮರ ಜನ್ಮ ದಿನಾಚರಣೆಯ ಪ್ರಯುಕ್ತ ಇಲಲ್ ಹಬೀಬ್ 2019 ಎಲಿಮಲೆ ಸಾಹುಕಾರ್ ವೇದಿಕೆಯಲ್ಲಿ ಜರುಗಿತು.. ಅಲ್ ಬದ್ರಿಯಾ
ಜಮಾಅತ್ ಕಮಿಟಿ ಅಧ್ಯಕ್ಷರಾದ ಇಕ್ಬಾಲ್ ಎಲಿಮಲೆಯವರು ಧ್ವಜಾರೋಹಣಗೈದರು ..
ನೂರುಲ್ ಹುದಾ ಮದ್ರಸ ಎಲಿಮಲೆ , ನೂರುಲ್ ಹುದಾ ಮದ್ರಸ ಮೆತ್ತಡ್ಕ ಹಾಗೂ ಹಯಾತುಲ್ ಇಸ್ಲಾಂ ದರ್ಸ್ ವಿಧ್ಯಾರ್ಥಿಗಳು ಪ್ರವಾದಿಯವರ ಸಂದೇಶಗಳನ್ನೊಳಗೊಂಡ ವಿವಿಧ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.


ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಎಲಿಮಲೆ ಮುದರ್ರಿಸರಾದ ತೌಸೀಫ್ ಸಅದಿ ಹರೇಕಳ ಮೀಲಾದ್ ಸಂದೇಶ ನೀಡಿ ಪ್ರವಾದಿಯವರು ಜೀವನದಲ್ಲಿ ತೋರಿದ ಹೃದಯ ವಿಶಾಲತೆಯು ಅವರ ಮಹತ್ವಕ್ಕೆ ಸಾಕ್ಷಿಯಾಗಿದೆ ..ಅವರ ಜೀವನ ಶೈಲಿಯು ಇಡೀ ವಿಶ್ವದಲ್ಲೇ ಬದಲಾವಣೆಯನ್ನು ತಂದಿದೆ ..ಅವರ ಜೀವನ ಹಾದಿಯನ್ನನುಸರಿಸಿ ಸ್ವಾರ್ಥ, ಮತ್ಸರ ಗಳನ್ನು ತೊರೆದು ಶುದ್ದ ಹೃದಯವಂತರಾಗಿ ಜೀವನ ಪಾವನಗೊಳಿಸಲು ಕರೆ ನೀಡಿದರು.
ಎಲಿಮಲೆ ಮದರಸ ಮುಖ್ಯೋಪಾಧ್ಯಾಯ ಮಹಮೂದ್ ಸಖಾಫಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು .ವಿವಿಧ ಸ್ಪರ್ಧೆ ಯಲ್ಲಿ ವಿಜೇತರಿಗೆ ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ಅಧ್ಯಕ್ಷ ಲತೀಫ್ ಹರ್ಲಡ್ಕ ಬಹುಮಾನ ವಿತರಿಸಿದರು..
ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಜಮಾ ಅತ್ ಕಮಿಟಿಯ ಅಧ್ಯಕ್ಷ ಇಕ್ಬಾಲ್ ಎಲಿಮಲೆಯವರು ವಹಿಸಿದ್ದರು..ಮುಖ್ಯ ಅತಿಥಿಗಳಾಗಿ ಜೀರ್ಮಕ್ಕಿ ಮಸೀದಿಯ ಅಧ್ಯಕ್ಷ ಜಿ ಎಸ್ ಅಬ್ದುಲ್ಲ, ತರ್ಬಿಯತುಲ್ ಇಸ್ಲಾಂ ಎಸೋಸಿಯೇಶನ್ ಅಧ್ಯಕ್ಷ ಹಸನ್ ಹರ್ಲಡ್ಕ,ಮೆತ್ತಡ್ಕ ಮದರಸ ಅಧ್ಯಾಪಕರಾದ ಶಫೀಕ್ ಹನೀಫಿ, ಜೀರ್ಮಕ್ಕಿ ಇಮಾಂ ಸೂಫಿ ಮುಸ್ಲಿಯಾರ್,ಮಸೀದಿಯ ಆಡಳಿತ ಕಾರ್ಯದರ್ಶಿ ಟಿ ವೈ ಇಬ್ರಾಹಿಂ, ಜಮಾಅತ್ ಕಮಿಟಿ ಸಲಹೆಗಾರರಾದ ಮೂಸ ಹಾಜಿ, ಜಮಾ ಅತ್ ಮಾಜಿ ಸಲಹೆಗಾರರೂ ಹಿರಿಯರೂ ಆದ ಅಬ್ಬಾಸ್ ಟಿ.ವೈ. ಉಪಸ್ಥಿತರಿದ್ದರು .. ನುಸ್ರತ್ ಉಪಾಧ್ಯಕ್ಷ ಕಲಂದರ್ ಎಲಿಮಲೆ, ಜತೆ ಕಾರ್ಯದರ್ಶಿ ಸಿದ್ದೀಕ್ ಎಲಿಮಲೆ, ಜಮಾಅತ್ ಉಪಾಧ್ಯಕ್ಷ ಅಬ್ದುಲ್ ಕಾದರ್ ಪಾಣಾಜೆ .ಕಾರ್ಯದರ್ಶಿ ಹನೀಫ್ ಮೆತ್ತಡ್ಕ, ಕೋಶಾಧಿಕಾರಿ ಮಹಮದ್ ಕುಂಞ ಮೇಲೆಬೈಲು ಸಹಕರಿಸಿದರು.
ಇದೇ ಸಂಧರ್ಭದಲ್ಲಿ ಕಲಂದರ್ ಎಲಿಮಲೆ ಮತ್ತುರಶೀದ್ ಎಲಿಮಲೆ, ಫೈಝಲ್ ಜೀರ್ಮಕ್ಕಿಯವರ ನೇತ್ರತ್ವದಲ್ಲಿ ಯುವಕರ ತಂಡವು ಹೊಸದಾಗಿ ಖರೀದಿಸಿದ ಮಯ್ಯತ್ ಸ್ನಾನದ ಟೆಂಟನ್ನು ಸಮಿತಿಗೆ ಹಸ್ತಾಂತರಿಸಲಾಯಿತು .
ಕಾರ್ಯದರ್ಶಿ ಸೂಫಿ ಎಲಿಮಲೆ ಸ್ವಾಗತಿಸಿ ವಂದಿಸಿದರು,ನಂತರ ಮಸೀದಿಯಲ್ಲಿ ನಡೆದ ಮೌಲೀದ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಅತರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ