ದಮಾಮ್: ಮಜ್ಲಿಸ್ ಶಿಫಾ ಅಸ್ಸಖಾಫ ಅಲ್ ಇಸ್ಲಾಮಿ ಆದೂರು ಇದರ ದಮಾಮ್ ಘಟಕದ ವತಿಯಿಂದ ಮಜ್ಲಿಸೆ ಮಹಬ್ಬಾ ಕಾರ್ಯಕ್ರಮ ದಮಾಮಿನ ಹೋಲಿಡೇಸ್ ಹೋಟೆಲ್ ನಲ್ಲಿ ಗುರುವಾರ ನಡೆಯಿತು.

ಸಯ್ಯಿದ್ ಅಶ್ರಫ್ ಅಸ್ಸಖಾಫ್ ಆದರೂ ತಂಙಳ್ ಕಾರ್ಯಕ್ರಮಕ್ಕೆ ನೇತೃತ್ವ ವಹಿಸಿದ್ದು, ಲೋಕದಲ್ಲಿ ಅತ್ಯುತ್ತಮ ಸ್ವಭಾವದ ವ್ಯಕ್ತಿಯೊಬ್ಬರಿದ್ದರೆ ಅದು ಮುಹಮ್ಮದ್ ನೆಬಿ ಸ್ವಲ್ಲಲ್ಲಾಹು ಅಲೈಹಿವಸಲ್ಲಂ ಆಗಿದ್ದಾರೆ ಎಂದು ಖುರಾನಿನ ಆಯತ್ ಸಮರ್ಥಿಸಿ ಮಾತನಾಡಿದರು.
ಯೂಸುಫ್ ಸಅದಿ ಅಯ್ಯಂಗೇರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಸಅದ್ ಅಮಾನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಬಿಯವರ ಸ್ವಭಾವವನ್ನು ಅನುಸರಿಸುತ್ತಾ, ಅವರ ಆದೇಶದಂತೆ ನಡೆದ ,ನಬಿ ಯವರ ಗೆಳೆಯ ಅಬೂಬಕ್ಕರ್ ಸಿದ್ದೀಕ್ (ರ.ಅ) ಗೆಳೆತನದ ಬಗ್ಗೆ ವಿವರಿಸಿದರು. ವಿಷಪೂರಿತ ಹಾವಿನ ಕಡಿತಕ್ಕೊಳಗಾದರೂ, ಸ್ನೇಹಿತನ ನಿದ್ದೆ ಗೆ ಭಂಗವಾಗದಿರಲಿ ಎಂಬ ಕಾರಣಕ್ಕೆ ನೋವಿನಲ್ಲೂ ಕಣ್ಣೀರು ಹಾಕಲು ಹಿಂದೇಟು ಹಾಕಿದ ಆ ಗೆಳೆತನ ನಮಗೆ ಮಾದರಿಯಾಗಿದೆ ಎಂದರು.

ವೇದಿಕೆಯಲ್ಲಿ ಜಾಫರ್ ತಂಙಳ್ ಕಾಸರಗೋಡು, ಅಬ್ದುಲ್ ಖಾದರ್ ಸಅದಿ ಆದೂರು,ದಮಾಮ್ ಘಟಕದ ಅಧ್ಯಕ್ಷ ಖಾಸೀಂ ಹಾಜಿ ಅಡ್ಡೂರು, ಮುಹಮ್ಮದ್ ಸಅದಿ ಪಡಿಯಡ್ಕ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಹಕೀಂ ಬೋಳಾರ್















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ