ಹೊಸದಿಲ್ಲಿ: ಬ್ಯಾಂಕ್ ಖಾತೆ ತೆರೆಯಲು ಹಾಗೂ ಸಿಮ್ ಕಾರ್ಡ್ ಖರೀದಿ ಸೇರಿದಂತೆ ಇತರೆ ಉದ್ದೇಶಗಳಿಗೆ ಸ್ವಯಂ ಪ್ರೇರಿತವಾಗಿ ಆಧಾರ್ ಕಾರ್ಡ್ ಅನ್ನು ಗುರುತಿನ ಸಾಕ್ಷ್ಯಕ್ಕೆ ಬಳಸಲು ಅವಕಾಶ ನೀಡುವ ಆಧಾರ್ ತಿದ್ದುಪಡಿ ವಿಧೇಯಕದ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಪ್ರತಿಕ್ರಿಯೆ ಕೋರಿ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ನೋಟಿಸ್ ನೀಡಿದೆ.
ಈ ಹಿಂದೆ ಪಂಚ ಸದಸ್ಯರ ಸಂವಿಧಾನ ಪೀಠವು, ಆಧಾರ್ ಕಾಯಿದೆಯ ಸಿಂಧುತ್ವ ಎತ್ತಿಹಿಡಿದಿದ್ದರೂ ಗ್ರಾಹಕರು ಆಧಾರ್ ಕಾರ್ಡ್ಅನ್ನು ಗುರುತಿನ ಪುರಾವೆಯಾಗಿ ಸ್ವಯಂ ಪ್ರೇರಿತವಾಗಿ ನೀಡಿದ್ದರೂ ಅದರ ಡೇಟಾ ಬಳಸದಂತೆ ಖಾಸಗಿ ಕಂಪನಿಗಳಿಗೆ ನಿರ್ಬಂಧ ವಿಧಿಸಿ ತೀರ್ಪು ನೀಡಿತ್ತು.
ಇದಾದ ನಂತರ ಕೇಂದ್ರ ಸರಕಾರ ಬ್ಯಾಂಕ್ ಖಾತೆ, ಮೊಬೈಲ್ ಸಿಮ್ ಕಾರ್ಡ್ ಸಂಪರ್ಕ ಸೇರಿ ಇತರೆ ಉದ್ದೇಶಗಳಿಗೆ ಸ್ವಯಂ ಪ್ರೇರಿತವಾಗಿ ಆಧಾರ್ ಅನ್ನು ಐಡಿ ಪ್ರೂಫ್ ಆಗಿ ನೀಡಬಹುದೆಂದು ಹೇಳಿ, ಈ ಸಂಬಂಧ ಆಧಾರ್ ಕಾಯಿದೆಗೆ ಈ ವರ್ಷ ತಿದ್ದುಪಡಿ ತಂದಿತ್ತು. ಈ ತಿದ್ದುಪಡಿಯ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ನಿವೃತ್ತ ಸೇನಾಧಿಕಾರಿ ಕರ್ನಾಟಕ ಮೂಲದ ಎಸ್.ಜಿ.ಒಂಬತ್ಕೆರೆ ಅವರು ಅರ್ಜಿ ಸಲ್ಲಿಸಿದ್ದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ