ಹರಿಹರ : ಎಸ್ಸೆಸ್ಸೆಫ್ ಇಹ್ಸಾನ್ ಕರ್ನಾಟಕದ ಅಧೀನ ಸಂಸ್ಥೆ ದಾರುಲ್ ಇಹ್ಸಾನ್ ಹರಿಹರ ಸೆಂಟರಿಗೆ ಕೆಸಿಎಫ್ ಅಬುಧಾಬಿ (UAE) ವತಿಯಿಂದ EECO ವ್ಯಾನ್ ಹಸ್ತಾಂತರಿಸಲಾಯಿತು.
ಉತ್ತರ ಕರ್ನಾಟಕದ ಧಾರ್ಮಿಕ ಹಾಗೂ ಶೈಕ್ಷಣಿಕ ಜಾಗೃತಿಗಾಗಿ ಎಸ್ಸೆಸ್ಸೆಫ್ ಇಹ್ಸಾನ್ ಹಾಗೂ ಕೆಸಿಎಫ್ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು ಈ ನಿಟ್ಟಿನಲ್ಲಿ ಮಧ್ಯ ಹಾಗೂ ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ಇಹ್ಸಾನ್ ಸೆಂಟರ್ಗಳನ್ನು ನಿರ್ಮಿಸಿದೆ. ಉತ್ತರ ಕರ್ನಾಟಕದ ಹದಿಮೂರು ಜಿಲ್ಲೆಗಳ ಇಪ್ಪತ್ತೈದು ಪ್ರಮುಖ ಕೇಂದ್ರಗಳಲ್ಲಿ ಇಪ್ಪತ್ತಕ್ಕೂ ಮಿಕ್ಕ ದಾಈಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಜಿಲ್ಲೆಗಳಿಗೆ ಕಾರ್ಯಾಚರಣೆಯನ್ನು ವ್ಯಾಪಿಸಲು ಯೋಜನೆ ಹಾಕಲಾಗಿದೆ.
ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ, ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಪ್ರಕಾಶನ ಸಮಿತಿ ಕಾರ್ಯದರ್ಶಿ ಮುಹಮ್ಮದ್ ಹಕೀಂ ತುರ್ಕಳಿಕೆ, ಯುಎಇ ರಾಷ್ಟ್ರೀಯ ನಾಯಕ ಅಹ್ಮದ್ ಕಬೀರ್ ಬಯಂಬಾಡಿ, ಅಬುಧಾಬಿ ಝೋನ್ ನಾಯಕರಾದ ಮೂಸಾ ಮದನಿ ಸಂಪ್ಯ, ಅಶ್ರಫ್ ಸರಳಿಕಟ್ಟೆ, ನಾಸಿರ್ ಗಾಳಿಮುಖ ಹಾಗೂ ಇಹ್ಸಾನ್ ದಾಈಗಳಾದ ಅಶ್ರಫ್ ಸಖಾಫಿ ಹರಿಹರ, ಯಾಸೀನ್ ಸಖಾಫಿ ಹಾವೇರಿ, ಮುನೀರ್ ಸಖಾಫಿ ರಾಣಿಬೆನ್ನೂರು, ಸಿದ್ದೀಕ್ ಫಾಲಿಳಿ ಜಗಳೂರು, ಶರೀಫ್ ಸಖಾಫಿ ಹರಿಹರ, ಬದ್ರುದ್ದೀನ್ ಸಖಾಫಿ ಲಕ್ಷ್ಮೇಶ್ವರ ನವಾಝ್ ಸಖಾಫಿ ಸಹಿತ ಇಹ್ಸಾನ್ ಸೆಂಟರ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇಹ್ಸಾನ್ ವಿಭಾಗ
(ಕೆ ಸಿ ಎಫ್ ಅಬುಧಾಬಿ)















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ