ಬೆಂಗಳೂರು ,ಡಿ. 10: ಗಗನಕ್ಕೇರಿದ್ದ ಈರುಳ್ಳಿ ಬೆಲೆ ಇದೀಗ ಇದ್ದಕ್ಕಿದ್ದಂತೆ ಕಡಿಮೆಯಾಗಿದೆ. ಒಂದು ಕೆ.ಜಿ.ಗೆ 200 ರೂ. ಗಡಿ ತಲುಪಿದ್ದ ಈರುಳ್ಳಿಗೆ ಒಳ್ಳೆಯ ಬೆಲೆಯಿದೆ ಎಂದು ಬೆಂಗಳೂರಿನ ಎಪಿಎಂಸಿಗೆ ಅಧಿಕ ಪ್ರಮಾಣದಲ್ಲಿ ಈರುಳ್ಳಿ ತರಲಾಗಿತ್ತು. ಆದರೆ, ಇದೀಗ ಈರುಳ್ಳಿ ಬೆಲೆ ಕಡಿಮೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಒಂದು ಕೆ.ಜಿ.ಗೆ 200 ರೂ. ಗಡಿ ತಲುಪಿದ್ದ ಈರುಳ್ಳಿ ಬೆಲೆ ಇದೀಗ ಗಣನೀಯವಾಗಿ ಇಳಿಕೆಯಾಗಿದೆ. ರಾಜಸ್ಥಾನ, ಮಹಾರಾಷ್ಟ್ರ, ಗುಜರಾತ್ನಿಂದ ಈರುಳ್ಳಿ ಆಮದು ಮಾಡಿಕೊಳ್ಳಲಾಗಿತ್ತು. ಒಂದು ಪ್ಯಾಕೆಟ್ ಉತ್ತಮ ಈರುಳ್ಳಿಗೆ 5 ಸಾವಿರ ರೂ. ನೀಡಿ ಈರುಳ್ಳಿ ಖರೀದಿಸಿ ತಂದಿದ್ದರು. ಎಪಿಎಂಸಿಯಲ್ಲಿ ಸಣ್ಣ ಮತ್ತು ಮಧ್ಯಮ ಗಾತ್ರದ ಹೊಸ ಈರುಳ್ಳಿ 1 ಕೆ.ಜಿಗೆ 80ರಿಂದ 100 ರೂ. ಆಗಿದೆ. ನಾಲ್ಕೈದು ದಿನಗಳ ಹಿಂದಿದ್ದ ಬೆಲೆಗಿಂತ ಅರ್ಧಕ್ಕರ್ಧ ಬೆಲೆ ಕಡಿಮೆಯಾಗಿದೆ.
ಈರುಳ್ಳಿಗೆ ಉತ್ತಮ ಬೆಲೆ ಮತ್ತು ಬೇಡಿಕೆಯಿದೆ ಎಂದು ಈಜಿಪ್ಟ್, ಟರ್ಕಿಯಿಂದ ತಂದ ಈರುಳ್ಳಿಯನ್ನು ಕೇಳುವವರೇ ಇಲ್ಲವಾಗಿದೆ. ಏಕಾಏಕಿ ಎಪಿಎಂಸಿಯಲ್ಲಿ ಈರುಳ್ಳಿ ಪೂರೈಕೆ ಅಧಿಕವಾಗಿದ್ದರಿಂದ ಬೇಡಿಕೆ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಈರುಳ್ಳಿಗೆ ಬೆಲೆ ಚೆನ್ನಾಗಿದೆ ಎಂದು ಸಾವಿರಾರುಗಟ್ಟಲೆ ಹಣ ಕೊಟ್ಟು ಖರೀದಿಸಿ ತಂದ ರೈತರ ಕಣ್ಣಲ್ಲಿ ನೀರು ಸುರಿಯುತ್ತಿದೆ. ಲಾಭ ಗಿಟ್ಟಿಸಿಕೊಳ್ಳುವ ನಿರೀಕ್ಷೆಯಲ್ಲಿ ಖರೀದಿಸಿ ಮಾರಾಟ ಮಾಡಲು ತಂದ ಈರುಳ್ಳಿಯಿಂದ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ