ಬೆಂಗಳೂರು: ಲೋಕಸಭೆಯಲ್ಲಿ ಸೋಮವಾರ ಪೌರತ್ವ ತಿದ್ದುಪಡಿ ಮಸೂದೆ (Citizenship Amendment Bill) ಅಂಗೀಕಾರಗೊಂಡಿದೆ. ಈ ಕುರಿತು ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ ಧರ್ಮದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವುದು ಸಂವಿಧಾನ ವಿರೋಧಿ ನಡೆ ಎಂದು ಬಣ್ಣಿಸಿದ್ದಾರೆ.
ಅವಸರದಿಂದ ಮಧ್ಯರಾತ್ರಿ ಲೋಕಸಭೆ ಅಂಗೀಕರಿಸಿದ ‘ಪೌರತ್ವ (ತಿದ್ದುಪಡಿ) ಮಸೂದೆ’ ಸಂವಿಧಾನದ ಮೂಲ ಆಶಯಗಳಾದ ಸಮಾನತೆ ಮತ್ತು ಜಾತ್ಯತೀತತೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಈ ಮಸೂದೆ ಧರ್ಮದ ಆಧಾರದಲ್ಲಿ ದೇಶ ಒಡೆಯುವ ಬಿಜೆಪಿಯ ಗುಪ್ತ ಅಜೆಂಡಾದ ಭಾಗವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಧರ್ಮದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವುದು ಸಂವಿಧಾನ ವಿರೋಧಿ ನಡೆ. ಈ ಮಸೂದೆಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಹತ್ತಿಕ್ಕುವ ದುರುದ್ದೇಶ ಇದೆಯೇ ಹೊರತು ವಲಸೆ ಸಮಸ್ಯೆಯನ್ನು ಪರಿಹರಿಸುವ ಸದುದ್ದೇಶ ಖಂಡಿತ ಇಲ್ಲ ಎಂದು ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ ಮೂಲಕ ದ್ವಿರಾಷ್ಟ್ರ ಸಿದ್ದಾಂತವನ್ನು ಪ್ರತಿಪಾದಿಸಿದ್ದ ಬಿಜೆಪಿಯ ಮೂಲಪುರುಷರ ಆಶಯವನ್ನು ಕೇಂದ್ರ ಸರ್ಕಾರ ಈಡೇರಿಸಲು ಹೊರಟಿರುವುದು ಸ್ಪಷ್ಟವಾಗಿದೆ. ದೇಶ ಒಡೆಯಲು ಹೊರಟಿರುವ ಬಿಜೆಪಿ ಸಂಚಿನ ವಿರುದ್ದ ಜಾತ್ಯತೀತ ಭಾರತ ಸಂಘಟಿತವಾಗಬೇಕು ಎಂದು ಅವರು ಕರೆ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ