ಮಂಗಳೂರು, ಡಿ.15: ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ವಿಮಾನ ಯಾನಿಯೊಬ್ಬನನ್ನು ಲೂಟಿಗೆ ಯತ್ನಿಸಿದ ಘಟನೆ ರವಿವಾರ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಮಸ್ಕತ್ನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಹಮ್ಮದ್ ಶಮ್ಮಾಝ್ ಎಂಬವರು ಇಮಿಗ್ರೇಶನ್ ಮತ್ತು ಕಸ್ಟಮ್ಸ್ ಪರಿಶೀಲನೆಗೊಳಗಾದ ಬಳಿಕ ಮನೆಗೆ ಹೋಗಲು ಟ್ಯಾಕ್ಸಿಗಾಗಿ ಕಾಯುತ್ತಿದ್ದರು. ಅಷ್ಟರಲ್ಲಿ ಅಲ್ಲಿಗೆ ಬಂದ ಮೂವರು ‘ತಾವು ಕಸ್ಟಮ್ಸ್ ಅಧಿಕಾರಿಗಳು’ ಎಂದು ಹೇಳಿಕೊಂಡು ಮುಹಮ್ಮದ್ ಶಮ್ಮಾಝ್ರ ಪಾಸ್ಪೋರ್ಟ್ ಪಡೆದುಕೊಳ್ಳುತ್ತಾರೆ. ಅಲ್ಲದೆ, ಇತರ ದಾಖಲೆಗಳನ್ನೂ ಕೇಳುತ್ತಾರೆ. ಇದರಿಂದ ಸಂಶಯಗೊಂಡ ಶಮ್ಮಾಝ್ ತಕ್ಷಣ ಒಳಗೆ ಹೋಗಿ ಅಲ್ಲಿನ ಅಧಿಕಾರಿಗಳ ಗಮನ ಸೆಳೆಯುತ್ತಾರೆ. ಅದನ್ನು ಗಮನಿಸಿದ ರಿಯಾಝ್, ಮುಹಮ್ಮದ್ ಸಾಹೇಬ್ ಕರಾಬೋ, ಖಾಝಿ ಅಫ್ತಾಬ್ ಎಂಬವರು ಅಲ್ಲಿಂದ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರು. ಅಷ್ಟರಲ್ಲಿ ಕರ್ತವ್ಯನಿರತ ಪೊಲೀಸರು ತಕ್ಷಣ ಬೆನ್ನೆಟ್ಟಿ ಮೂವರನ್ನೂ ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸುತ್ತಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯ ಬಗ್ಗೆ ಸಮರ್ಪಕ ತನಿಖೆ ನಡೆಸುವ ಸಲುವಾಗಿ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಬಂದ ಮೂವರು ಆರೋಪಿಗಳಲ್ಲದೆ, ಮಸ್ಕತ್ನಿಂದ ಮಂಗಳೂರಿಗೆ ಬಂದ ಶಮ್ಮಾಝ್ ರನ್ನೂ ವಶಕ್ಕೆ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಳಿಕ ನಾಲ್ಕು ಮಂದಿಯನ್ನೂ ವಿಚಾರಣೆಗಾಗಿ ಬಜ್ಪೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್