ದುಬೈ: ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿ ಸಂಸ್ಥೆಗಳು ನೌಕರರ ಕೆಲಸದ ಸಮಯದಲ್ಲಿ ರಿಯಾಯತಿಯನ್ನು ನೀಡಬೇಕೆಂದು ಯುಎಇ ಕಾರ್ಮಿಕ ಸಚಿವಾಲಯ ಒತ್ತಾಯಿಸಿದೆ. ನೌಕರರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಿದೆ.
ಯುಎಇ ಅಧಿಕಾರಿಗಳು ಕೆಟ್ಟ ವಾತಾವರಣದಲ್ಲಿ ಉದ್ಯೋಗ ಸಮಯದಲ್ಲಿ ವಿನಾಯಿತಿಗೆ ಕರೆ ನೀಡಿದ್ದು, ಹವಾಮಾನ ಕೆಟ್ಟದಾಗಿದ್ದರೆ, ಕೆಲಸದ ಸಮಯದಲ್ಲಿ ರಾಜಿ ಮಾಡಿಕೊಳ್ಳಲು ತಯಾರಾಗಬೇಕು ಮಳೆ ಮತ್ತು ಮಂಜಿನ ಸಂದರ್ಭದಲ್ಲಿ ಕಾರ್ಮಿಕರ ಸುರಕ್ಷತೆಯನ್ನು ಗಣನೆಗೆ ತೆಗೆದುಕೊಳ್ಳಬೇಕು. ಸಂಸ್ಥೆಗಳು ಕಾರ್ಮಿಕರ ಪ್ರಯಾಣ ಸುರಕ್ಷಿತವಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು. ಕಳೆದ ವರ್ಷ ಸಚಿವಾಲಯ ಹೊರಡಿಸಿದ ಸುತ್ತೋಲೆಯನ್ನು ಉಲ್ಲೇಖಿಸಿ ಸಚಿವಾಲಯ ಮತ್ತೆ ನಿರ್ದೇಶನ ನೀಡಿದೆ.
ಹವಾಮಾನ ಬದಲಾವಣೆಯ ಸಂದರ್ಭದಲ್ಲಿ ಉದ್ಯೋಗದಾತರು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಜಾಗರೂಕರಾಗಿರಬೇಕು. ನೌಕರರು ಕೆಲಸಕ್ಕೆ ತಡವಾಗಿ ಬರಬಹುದು ಎಂಬುದನ್ಬು ಪರಿಗಣಿಸಬೇಕು. ಈ ಸಂದರ್ಭಗಳಲ್ಲಿ ಸ್ವಯಂ ಸುರಕ್ಷತೆ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ನೌಕರರಿಗೆ ತಿಳಿಸಲು ಸಚಿವಾಲಯ ಟ್ವಿಟರ್ ಮೂಲಕ ಕರೆ ನೀಡಿದೆ. ಇದನ್ನು ಉಲ್ಲೇಖಿಸಿ ಸಚಿವಾಲಯ ವಿಡಿಯೋ ಕೂಡ ಬಿಡುಗಡೆ ಮಾಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು