janadhvani

Kannada Online News Paper

ಮಂಗಳೂರು: ಪೋಲೀಸ್ ಗುಂಡೇಟಿಗೆ ಅಮಾಯಕರಿಬ್ಬರು ಬಲಿ- ಐ.ಎನ್.ಸಿ (KCF) ತೀವ್ರ ಖಂಡನೆ

ದಮ್ಮಾಮ್, ಡಿ.19 :ಭಾರತ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನ ನಾಗರಿಕರು ಸ್ವಯಂ ಪ್ರೇರಿತವಾಗಿ ನಡೆಸಿದ ಶಾಂತಿಯುತ ಪ್ರತಿಭಟನೆಯ ವಿರುದ್ಧ ಲಾಠಿ ಚಾರ್ಜ್ ಮತ್ತು ಗೋಲಿಬಾರ್ ನಡೆಸಿ ಇಬ್ಬರು ಅಮಾಯಕರನ್ನು ವಧಿಸಿದ ಪೋಲೀಸ್ ಕ್ರಮವನ್ನು ಕೆ.ಸಿ.ಎಫ್ ಇಂಟರ್ ನ್ಯಾಷನಲ್ ಸಮಿತಿ(INC) ತೀವ್ರವಾಗಿ ಖಂಡಿಸಿದೆ.

ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಮತ್ತು ಅಮಾಯಕ ಯುವಕರ ಬಲಿಗೆ ಪೋಲೀಸ್ ಆಯುಕ್ತರೇ ನೇರ ಕಾರಣವೆನ್ನಲಾಗಿದ್ದು, ಮುಖ್ಯಮಂತ್ರಿಯವರ ಆದೇಶದ ಹೊರತಾಗಿಯೂ ಪ್ರತಿಭಟನಾ ನಿರತರ ಮೇಲೆ ಮತ್ತು ಪತ್ರಕರ್ತರ ಮೇಲೆ ಲಾಠಿ ಚಾರ್ಜ್ ಮತ್ತು ಗೋಲಿಬಾರ್ ನಡೆದಿದೆ.

ಆದ್ದರಿಂದ ರಾಜ್ಯ ಸರ್ಕಾರವು ಕೂಡಲೇ ಈ ಘಟನೆಯ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳಿಂದ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥ ಪೋಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ NRC ಮತ್ತು CAA ನ್ನು ಹಿಂಪಡೆಯಲು ಕೇಂದ್ರವನ್ನು ಒತ್ತಾಯಿಸಬೇಕು ಎಂದು KCF ಇಂಟರ್ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷರಾದ ಹಾಜಿ ಶೈಖ್ ಬಾವಾ ಹಾಗೂ ಪ್ರ.ಕಾರ್ಯದರ್ಶಿ ಖಮರುದ್ದೀನ್ ಗೂಡಿನಬಳಿಯವರು ಸೌದಿ, ದಮ್ಮಾಮ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.