ಮಂಗಳೂರು, ಡಿಸೆಂಬರ್ 19 : ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ
ಇಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತರುವ ಬದಲಾಗಿ ಪ್ರತಿಭಟನಾ ನಿರತರ ಮೇಲೆ ಮತ್ತು ಪತ್ರಕರ್ತರ ಮೇಲೆ ಲಾಠಿ ಚಾರ್ಜ್ ಮತ್ತು ಗೋಲಿಬಾರ್ ನಡೆಸಿರುವುದು ಅದೂ ಕೂಡ ಮುಖ್ಯಮಂತ್ರಿಯವರ ಆದೇಶದ ಹೊರತಾಗಿಯೂ ಇದು ಕಾನೂನಿಗೂ ವಿರುದ್ಧ.. ಈ ಕ್ರತ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ.
ಈ ಒಂದು ಸಣ್ಣ ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತರಲು ಅಸಾಧ್ಯವಾದ ಪೊಲೀಸ್ ಕಮಿಷನರ್ ನಿಂದ ಇಂದು ಮಂಗಳೂರು ಅಕ್ಷರಶಃ ರಣರಂಗವಾಗಿ ಮಾರ್ಪಾಡಾಗಿದೆ ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಮತ್ತು ಅಮಾಯಕ ಯುವಕರ ಬಲಿಗೆ ಪೋಲೀಸ್ ಆಯುಕ್ತರೇ ನೇರ ಕಾರಣ
ರಾಜ್ಯ ಸರ್ಕಾರ ಕೂಡಲೇ ಮಂಗಳೂರು ಪೋಲೀಸ್ ಆಯುಕ್ತರನ್ನು ವಜಾ ಗೊಳಿಸಬೇಕು, ಈ ಘಟನೆಯ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳಿಂದ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥ ಪೋಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಮೃತರ ಕುಟುಂಬಕ್ಕೆ ಉತ್ತಮ ಪರಿಹಾರ ನೀಡಬೇಕು, ಗಾಯಾಳುಗಳಿಗೆ ಬೇಕಾದ ಚಿಕಿತ್ಸೆಯನ್ನು ಸರ್ಕಾರವೇ ನೀಡಬೇಕು.
ನಮ್ಮ ಸಮುದಾಯದವರು ಶಾಂತಿಯುತವಾದ , ಕಾನೂನು ಬದ್ಧವಾದ ಹೋರಾಟ ನಡೆಸಬೇಕು
ಕಾನೂನು ಬದ್ಧವಾದ ಹಾಗೂ ಅಶಾಂತಿಯನ್ನು ಯಾವುದೇ ಕಾರ್ಯ ನಮ್ಮಿಂದ ಉಂಟಾಗದಿರಲಿ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಜಮಾಅತ್ ಹಾಗೂ ಜಿಲ್ಲಾ ಸಂಯುಕ್ತ ಜಮಾಅತ್ ಕಾರ್ಯದರ್ಶಿ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ