ಮಕ್ಕತುಲ್ ಮುಕರ್ರಮಃ: ವಿಶ್ವದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವೆಂಬ ಹೆಗ್ಗಳಿಕೆಯ ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿ ಧಾರ್ಮಿಕ ವಿಭಜನೆಗೆ ಕೇಂದ್ರ ಸರಕಾರ ಮುಂದಾಗಿದೆ.
ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.ಜನಾಕ್ರೋಶ ದೈನಂದಿನ ತಾರಕಕ್ಕೇರುತ್ತಿದ್ದು, ಕೇಂದ್ರ ಸರ್ಕಾರ ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಗೆ ಮುಂದಾಗಿಲ್ಲ.ಕೇಂದ್ರ ಸರಕಾರವು ಶೀಘ್ರದಲ್ಲೇ CAA ಯನ್ನು ಹಿಂಪಡೆದು ದೇಶದಲ್ಲಿ ಶಾಂತಿ ನೆಲೆಸುವಲ್ಲಿ ಗಮನ ಹರಿಸಬೇಕಾಗಿದೆ.
ರಾಜ್ಯದ ಪ್ರಜಾಪ್ರಭುತ್ವ ಸಂರಕ್ಷಣೆಗಾಗಿ ಹೋರಾಡುವ ವೇಳೆ ಪೋಲೀಸರ ದೌರ್ಜನ್ಯದಿಂದ ಹಲವಾರು ಮಂದಿ ಅಸುನೀಗಿದ್ದು, ನೂರಾರು ಮಂದಿ ತೀವ್ರ ಗಾಯಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೂ ಅಲ್ಲದೇ ಹಲವಾರು ಮಂದಿಯನ್ನು ಬಂಧಿಸಲಾಗಿದೆ.
ಪ್ರಸಕ್ತ ಸನ್ನಿವೇಶದಲ್ಲಿ ಭವ್ಯ ಭಾರತದ ಪ್ರಜಾಪ್ರಭುತ್ವ ಪರಂಪರೆಯೊಂದಿಗೆ, ಸಹಬಾಳ್ವೆಯಿಂದ ಸರ್ವ ಧರ್ಮೀಯರೊಂದಿಗೆ ಬದುಕುವ ಶಾಂತಿ ಮರುಕಳಿಸಲಿ ಎಂದು ಹಾರೈಸಿ KCF ಮಕ್ಕತುಲ್ ಮುಕರ್ರಮಃ ಸೆಕ್ಟರ್ ವತಿಯಿಂದ ಸಾಮೂಹಿಕ ಉಮ್ರಾ ಹಾಗೂ ವಿಶೇಷ ಪ್ರಾರ್ಥನೆ ಕಾರ್ಯಕ್ರಮ ನಡೆಸಲಾಯಿತು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ