ದುಬೈ,ಜ.3: ಮೇಜರ್ ಜನರಲ್ ಖಾಸಿಂ ಸುಲೈಮಾನಿಯನ್ನು ಅಮೆರಿಕ ಹತ್ಯೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇರಾನ್ ಕೆಂಡಕಾರಿದೆ. ಇಂದೊಂದು ಮೂರ್ಖತನದ ನಿರ್ಧಾರ ಎಂದಿರುವ ಇರಾನ್, ಮುಂದಾಗುವ ಪರಿಣಾಮಗಳಿಗೆ ನೀವೇ ಕಾರಣ ಎಂದು ಹೇಳಿದೆ.
ಇರಾನ್ ಮೇಜರ್ ಜನರಲ್ ಖಾಸಿಂ ಸುಲೈಮಾನಿಯರ ಹತ್ಯೆ ನಂತರ ಮಾತನಾಡಿದ ಇರಾನ್ ವಿದೇಶಾಂಗ ಸಚಿವ ಮೊಹ್ಮದ್ ಜಾವದ್ ಜಾರಿಫ್, “ಅಮೆರಿಕ ಮೂರ್ಖ ಹಾಗೂ ಅತಿ ಅಪಾಯಕಾರಿ ನಿರ್ಧಾರ ಕೈಗೊಂಡಿದೆ. ಇದರಿಂದ ಉಂಟಾಗುವ ಪರಿಣಾಮಗಳ ಹೊಣೆಯನ್ನು ಅಮೆರಿಕವೇ ಹೊತ್ತುಕೊಳ್ಳಲಿ,” ಎಂದಿದ್ದಾರೆ. ಘಟನೆ ನಂತರದಲ್ಲಿ ಇರಾನ್ ಹಾಗೂ ಅಮೆರಿಕದ ನಡುವೆ ಯುದ್ಧ ಭೀತಿ ಎದುರಾಗಿದೆ. ಇನ್ನು, ಇರಾನ್ನಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಶುಕ್ರವಾರ ಬಾಗ್ದಾದ್ ವಿಮಾನ ನಿಲ್ದಾಣದ ಸಮೀಪ ಅಮೆರಿಕ ರಾಕೆಟ್ ದಾಳಿ ನಡೆಸಿತ್ತು. ಈ ವೇಳೆ ಖಾಸಿಂ ಸುಲೈಮಾನಿ ಜತೆ ಇರಾಕ್ ಬೆಂಬಲಿತ ಹಶ್ದ್ ಪಡೆಯ ಡೆಪ್ಯುಟಿ ಕಮಾಂಡರ್ ಅಬು ಮಹ್ದಿ ಅಲ್ ಮುಹಂದಿಸ್ ಕೂಡ ಬಲಿಯಾಗಿದ್ದಾರೆ.
ಖಾಸಿಂ ಸುಲೈಮಾನಿರನ್ನು ಅಮೆರಿಕ ತನ್ನ ಬದ್ಧ ವೈರಿ ಎಂದೇ ಪರಿಗಣಿಸಿತ್ತು.ಇವರು ಇರಾನ್ ಸಶಸ್ತ್ರ ಹೋರಾಟ ನಿಯಂತ್ರಿಸುತ್ತಿದ್ದರು. ಸುಲೈಮಾನಿ ಇರಾನ್ ಗುಪ್ತಚರ ಇಲಾಖೆಯ ಮುಖ್ಯಸ್ಥರು ಕೂಡ ಹೌದು. “ನಿಮಗೆ ಇಷ್ಟಬಂದಾಗ ನೀವು ಯುದ್ಧ ಆರಂಭಿಸಿ. ಆದರೆ, ಅದನ್ನು ಮುಗಿಸುವುದು ಮಾತ್ರ ನಾವೇ,” ಎಂದು ಸುಲೈಮಾನಿ ಅಮೆರಿಕಕ್ಕೆ ಬೆದರಿಕೆ ಹಾಕಿದ್ದರು. ಇವರನ್ನು ವಧಿಸಲು ಇದು ಕೂಡ ಒಂದು ಕಾರಣ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್