ರಿಯಾದ್: ಇರಾನಿನ ಉನ್ನತ ಸೇನಾಧಿಕಾರಿಯನ್ನು ವಧಿಸಿದ ಅಮೆರಿಕದ ಆಕ್ರಮಣದ ಹಿನ್ನೆಲೆಯಲ್ಲಿ ಕೊಲ್ಲಿ ರಾಷ್ಟ್ರಗಳು ಹೆಚ್ಚಿನ ಎಚ್ಚರಿಕೆ ವಹಿಸಿದ್ದು, ಪ್ರತೀಕಾರ ಮತ್ತು ಯುದ್ಧವನ್ನು ತಪ್ಪಿಸಲು ಕೊಲ್ಲಿ ರಾಷ್ಟ್ರಗಳು ಬಯಸುತ್ತಿವೆ.
ಇರಾನ್ ಮೇಲಿನ ದಾಳಿಯು ಭಯೋತ್ಪಾದನೆಯ ಪರಿಣಾಮವಾಗಿದೆ ಎಂದು ಸೌದಿ ಅರೇಬಿಯಾ ಪ್ರತಿಕ್ರಿಯಿಸಿದ್ದು, 3,000 ಸೈನಿಕರನ್ನು ಕುವೈತ್ಗೆ ಕಳುಹಿಸಲು ಅಮೆರಿಕ ಆದೇಶಿಸಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಇರಾನಿನ ಕುದ್ಸ್ ಫೋರ್ಸ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರನ್ನು ಯುಎಸ್ ಡ್ರೋನ್ ದಾಳಿಯ ಮೂಲಕ ಹತ್ಯೆಗೈದ ನಂತರ ಪಶ್ಚಿಮ ಏಷ್ಯಾ ತೀವ್ರ ಸಂಕಷ್ಟದಲ್ಲಿದೆ. ವಿಷಯಗಳನ್ನು ಯುದ್ಧಕ್ಕೆ ಹೋಗದಂತೆ ತಡೆಯುವ ರಾಜತಾಂತ್ರಿಕ ಕ್ರಮಗಳು ಈಗ ಪ್ರಗತಿಯಲ್ಲಿವೆ. ಹೆಚ್ಚಿನ ಕೊಲ್ಲಿ ರಾಷ್ಟ್ರಗಳು ಯುದ್ಧವು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು ಎಂದು ಎಚ್ಚರಿಸಿದೆ.
ಉಗ್ರವಾದ ಕುರಿತು ಸೌದಿಯು ನೀಡಿದ ಎಚ್ಚರಿಕೆಯನ್ನು ಅವಗಣಿಸಿದ ಪರಿಣಾಮವಾಗಿ ಈ ಘಟನೆ ನಡೆದಿದೆ ಎಂದ ಸೌದಿ ವಿದೇಶಾಂಗ ಸಚಿವ ಆದಿಲ್ ಅಲ್ ಝುಬೈರ್, ಈ ಪ್ರದೇಶದಲ್ಲಿ ಶಾಂತಿಯನ್ನು ಕಾಪಾಡಲು ವಿಶ್ವ ರಾಷ್ಟ್ರಗಳು ಮುಂದಾಗಬೇಕೆಂದು ಕರೆ ನೀಡಿದ್ದಾರೆ.
ಹೆಚ್ಚಿನ ಸಂಘರ್ಷಗಳಿಗೆ ಕಾರಣವಾಗದಂತೆ ವಿವೇಕದಿಂದ ಸಂಪೂರ್ಣ ರಾಜಕೀಯ ಪರಿಹಾರ ಕಂಡುಕೊಳ್ಳಬೇಕೆಂದು ಯುಎಇ ವಿದೇಶಾಂಗ ಸಚಿವ ಡಾ.ಅನ್ವರ್ ಗರ್ಗಾಶ್ ಹೇಳಿದರು. ಖತರ್ ಮತ್ತು ಕುವೈತ್ ಯುದ್ಧವು ಊಹಿಸಲಾಗದಷ್ಟು ಹೆಚ್ಚಿನ ಹಾನಿಯನ್ನುಂಟುಮಾಡಲಿದೆ ಎಂದು ಎಚ್ಚರಿಸಿದೆ. ಶಾಂತಿಗಾಗಿ ಅಂತರ್ರಾಷ್ಟ್ರೀಯ ಮಟ್ಟದ ಪ್ರಯತ್ನ ನಡೆಯಬೇಕು ಎಂದು ಬಹ್ರೈನ್ ಕರೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್