ಹೊಸದಿಲ್ಲಿ: ಜೆಎನ್ ಯು ಕ್ಯಾಂಪಸ್ ನೊಳಕ್ಕೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ನಡೆಸಿ, ದಾಂಧಲೆಗೈದ ದುಷ್ಕರ್ಮಿಗಳ ತಂಡದ ಕೃತ್ಯವನ್ನು ಹಲವು ರಾಜಕೀಯ ನಾಯಕರು ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಜೆಎನ್ ಯು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲಿನ ದಾಳಿಯು ಆಘಾತಕಾರಿ. ನಮ್ಮ ದೇಶದ ನಿಯಂತ್ರಣ ಹೊಂದಿರುವ ಫ್ಯಾಶಿಸ್ಟರು ನಮ್ಮ ವೀರ ವಿದ್ಯಾರ್ಥಿಗಳ ಧ್ವನಿಯಿಂದ ಹೆದರಿದ್ದಾರೆ” ಎಂದಿದ್ದಾರೆ.
“ನಾವು ಟಿವಿಯಲ್ಲಿ ಏನು ನೋಡುತ್ತಿದ್ದೆವೋ ಅದು ಆಘಾತಕಾರಿ. ಪೊಲೀಸರು ಏನು ಮಾಡುತ್ತಿದ್ದಾರೆ? ಪೊಲೀಸ್ ಕಮಿಷನರ್ ಎಲ್ಲಿದ್ದಾರೆ” ಎಂದು ಪ್ರಶ್ನಿಸಿ ಪಿ.ಚಿದಂಬರಂ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, “ಚರ್ಚೆಗಳು, ಅಭಿಪ್ರಾಯಗಳ ಸ್ಥಳವಾಗಿದೆ, ಆದರೆ ಹಿಂಸೆಗೆ ಅವಕಾಶವಿರದ ಜೆಎನ್ ಯುನ ಭಯಾನಕ ಚಿತ್ರಗಳು. ಇಂದಿನ ಘಟನೆಯನ್ನು ಖಂಡಿಸುತ್ತೇನೆ” ಎಂದಿದ್ದಾರೆ.

ಘಟನೆಯ ಬಗ್ಗೆ ಟ್ವೀಟ್ ಮಾಡಿರುವ ಯೋಗೇಂದ್ರ ಯಾದವ್, “ಜೆಎನ್ ಯುಗೆ ತೆರಳುವ ಎಲ್ಲಾ ಮಾರ್ಗಗಳನ್ನು ಬ್ಲಾಕ್ ಮಾಡಿದ ದಿಲ್ಲಿ ಪೊಲೀಸರು. ಗೂಂಡಾಗಳಿಗೆ ಕ್ಯಾಂಪಸ್ ನೊಳಗೆ ಮುಕ್ತವಾಗಿ ತಿರುಗಾಡಲು ಅವಕಾಶ ನೀಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದೇ ಘಟನೆಯ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಾಜಿ ಆಪ್ತ ಕಾರ್ಯದರ್ಶಿ ಸಂಜಯ ಬಾರು, “ನಾನು ಕ್ಯಾಂಪಸ್ ನಲ್ಲಿರುವುದಿಲ್ಲ. ನನ್ನ ಪತ್ನಿ ಅಲ್ಲಿ ಉದ್ಯೋಗದಲ್ಲಿದ್ದಾರೆ. ಅವರ ವಿದ್ಯಾರ್ಥಿಗಳು ಕ್ಯಾಂಪಸ್ ನೊಳಗಿರುತ್ತಾರೆ. ಹೆದರಿರುವ ವಿದ್ಯಾರ್ಥಿಗಳು ಕರೆ ಮಾಡುತ್ತಿದ್ದಾರೆ. ಇದು ಪೂರ್ವನಿಯೋಜಿತ ದಾಳಿ” ಎಂದಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ