ರಿಯಾದ್: ಇರಾನಿನ ಮಿಲಿಟರಿ ಜನರಲ್ ಖಾಸಿಮ್ ಸುಲೈಮಾನಿ ಹತ್ಯೆಗೈಯ್ಯಲ್ಪಟ್ಟ ನಂತರ ಸೌದಿ ಯುವರಾಜ ಮತ್ತು ಯುಎಸ್ ನಡುವೆ ಮಾತುಕತೆ ನಡೆದಿವೆ. ಈ ವಲಯದಲ್ಲಿ ಉದ್ವಿಗ್ನತೆಯನ್ನು ತಪ್ಪಿಸಲು ಶಾಂತಿ ಕಾಪಾಡುವಂತೆ ಸೌದಿ ಅರೇಬಿಯಾ ಎಲ್ಲರೊಂದಿಗೆ ವಿನಂತಿಸಿದೆ . ಗಲ್ಫ್ ಪ್ರದೇಶದಲ್ಲಿನ ಅಸ್ಥಿರತೆಯು ಜಾಗತಿಕ ಉದ್ಯಮಕ್ಕೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಎಲ್ಲಾ ರಾಷ್ಟ್ರಗಳು ಮಧ್ಯಪ್ರವೇಶಿಸಬೇಕೆಂದು ಸೌದಿ ವಿದೇಶಾಂಗ ಸಚಿವಾಲಯ ಕರೆ ನೀಡಿದೆ.
ಈ ವಲಯದಲ್ಲಿ ಇರಾನ್ನ ಭಯೋತ್ಪಾದಕ ಚಟುವಟಿಕೆಗಳ ಪರಿಣಾಮವೇ ಇರಾಕ್ ಪ್ರಕರಣ ಸಂಭವಿಸಿದೆ ಎಂದು ಸೌದಿ ಅರೇಬಿಯಾ ಅಂದಾಜಿಸಿದೆ. ಈ ವಿಷಯದ ಬಗ್ಗೆ ಸೌದಿ ಅರೇಬಿಯಾದ ಎಚ್ಚರಿಕೆಗಳನ್ನು ಭಯೋತ್ಪಾದಕ ಗುಂಪುಗಳು ಹೆಚ್ಚಾಗಿ ಕಡೆಗಣಿಸಿವೆ. ಇರಾನ್ ಗಲ್ಫ್ ವಲಯವನ್ನು ಅಸ್ಥಿರಗೊಳಿಸುವ ಕ್ರಮವನ್ನು ತಡೆಯಬೇಕು.
ಇರಾಕ್ ನಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಪ್ರದೇಶದಲ್ಲಿ ಗಂಭೀರ ಪರಿಣಾಮಗಳು ಉಂಟಾಗಲಿದೆ ಎಂದು ಸೌದಿ ವಿದೇಶಾಂಗ ವ್ಯವಹಾರಗಳ ಸಚಿವ ಆದಿಲ್ ಅಲ್ ಝುಬೈರ್ ಟ್ವೀಟ್ ಮಾಡಿದ್ದಾರೆ. ಏತನ್ಮಧ್ಯೆ, ಸೌದಿ ಕ್ರೌನ್ ರಾಜಕುಮಾರ ಮತ್ತು ಯುಎಸ್ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ. ಉದ್ವಿಗ್ನತೆಯನ್ನು ಕಡಿಮೆ ಮಾಡುವ ಕ್ರಮಗಳ ಬಗ್ಗೆ ಇವರಿಬ್ಬರು ಚರ್ಚಿಸಿದರು ಎಂದು ಸೌದಿ ಪತ್ರಿಕಾ ಸಂಸ್ಥೆ ತಿಳಿಸಿದೆ.
ಏತನ್ಮಧ್ಯೆ ಸಂಘರ್ಷವನ್ನು ನಿವಾರಿಸಲು ಯುಎಸ್ ಬದ್ದವಾಗಿದೆ ಎಂದು ರಾಜ್ಯ ಇಲಾಖೆಯ ವಕ್ತಾರ ಮೋರ್ಗನ್ ಒರ್ಟೆಗಾಸ್ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್