ಮಂಗಳೂರು: ಸಂವಿಧಾನದ ಸಂರಕ್ಷಣೆಗಾಗಿ ಹಾಗೂ CAA, NRC, NPR ಮುಂತಾದ ಜನವಿರೋಧಿ ಕಾಯ್ದೆಗಳ ವಿರುದ್ಧ ಬಜ್ಪೆ ಸಂವಿಧಾನ ಸಂರಕ್ಷಣಾ ವೇದಿಕೆಯ ವತಿಯಿಂದ ಜನವರಿ 17, ಶುಕ್ರವಾರ ಬಜ್ಪೆಯಲ್ಲಿ ನಡೆಯಲಿರುವ ‘ನಾಗರಿಕ ಹಕ್ಕು’ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಎಸ್ಸೆಸ್ಸೆಫ್ ಬಜ್ಪೆ ಸೆಕ್ಟರ್ ಸಮಿತಿಯು ಕರೆ ನೀಡಿದೆ.
ಸಂವಿಧಾನವು ಅಪಾಯದ ಅಂಚಿನಲ್ಲಿದ್ದು, ಭಾರತದ ಉದ್ದಗಲಕ್ಕೂ ದೇಶಪ್ರೇಮಿಗಳು ಒಕ್ಕೊರಲಿನಿಂದ ತ್ರಿವರ್ಣ ಧ್ವಜವನ್ನು ಎದೆಗೊತ್ತಿ ಸಂವಿಧಾನದ ರಕ್ಷಣೆಗಾಗಿ ಹೋರಾಡುತಿದ್ದಾರೆ. ಭಾರತೀಯರ ಪೌರತ್ವವನ್ನು ಪ್ರಶ್ನಿಸುವವರ ವಿರುದ್ಧ ಧ್ವನಿಯೆತ್ತುವುದು ಕಾಲದ ಬೇಡಿಕೆಯಾಗಿದೆ.
ಈ ನಿಟ್ಟಿನಲ್ಲಿ ಬಜ್ಪೆಯ ಹಳೇ ಪೆಟ್ರೋಲ್ ಬಂಕ್ ಬಳಿ ನಾಳೆ ಮಧ್ಯಾಹ್ನ 2:30ಕ್ಕೆ ನಡೆಯಲಿರುವ ಬೃಹತ್ ನಾಗರಿಕ ಹಕ್ಕು ಸಮಾವೇಶದಲ್ಲಿ ಬಜ್ಪೆ ಪರಿಸರದ ಎಲ್ಲಾ ಎಸ್ಸೆಸ್ಸೆಫ್ ಕಾರ್ಯಕರ್ತರು, ಸುನ್ನಿ ಸಂಘ ಕುಟುಂಬದ ಸರ್ವ ಸದಸ್ಯರು ಹಾಗೂ ಊರಿನ ಎಲ್ಲಾ ನಾಗರಿಕರು ಪಾಲ್ಗೊಂಡು ಸಭೆಯನ್ನು ಯಶಸ್ವಿ ಗೊಳಿಸಬೇಕಾಗಿ ಎಸ್ಸೆಸ್ಸೆಫ್ ಬಜ್ಪೆ ಸೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದೆ.
-ಅಧ್ಯಕ್ಷರು ಮತ್ತು ಸರ್ವ ಸದಸ್ಯರು
🇸🇱 SSF ಬಜ್ಪೆ ಸೆಕ್ಟರ್🇸🇱















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ