ಸಿದ್ದಾಪುರ : ಎಸ್ಸೆಸ್ಸೆಫ್ ಎಸ್ವೈಎಸ್ ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ಕೊಪ್ಪಳ ಜಿಲ್ಲಾ ವತಿಯಿಂದ 50 ಜೋಡಿ ಸರ್ವಧರ್ಮ ಸಾಮೂಹಿಕ ವಿವಾಹ ಹಾಗೂ ಬೃಹತ್ ಸರ್ವಧರ್ಮ ಸಮ್ಮೇಳನ ಜೂನ್ 13 ಹಾಗೂ 14 ರಂದು ಕಾರಟಗಿ ತಾಲೂಕಿನ ಸಿದ್ದಾಪುರ APMC ಗ್ರೌಂಡ್ನಲ್ಲಿ ನಡೆಯಲಿದೆ.
ಜೂನ್ 13 ಸಂಜೆ 6ಗಂಟೆಗೆ ಬೃಹತ್ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು ರಾಷ್ಟ್ರ ಮಟ್ಟದ ಧರ್ಮಗುರುಗಳು, ಚಿಂತಕರು ಸಾಮಾಜಿಕ ಶೈಕ್ಷಣಿಕ ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ.
ಜೂನ್ 14 ರವಿವಾರ ಬೆಳಿಗ್ಗೆ 10 ಘಂಟೆಗೆ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.
ವಧು,ವರರಿಗೆ ಸ್ವರ್ಣದೊಂದಿಗೆ ಉತ್ತರ ಕರ್ನಾಟಕದ ಪದ್ದತಿಯಂತೆ ಬೆಳ್ಳಿ, ವಸ್ತ್ರಗಳು, ಪಾತ್ರೆಗಳು, ಗೋಡ್ರೇಜ್ ಹಾಗೂ ಮಂಚ ಗಾದಿಯನ್ನು ನೀಡಲಾಗುತ್ತದೆ.
ಸಭೆಯಲ್ಲಿ ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಧ್ಯಕ್ಷತೆ ವಹಿಸಿದರು.
ಎಸ್ಸೆಸ್ಸೆಫ್ ರಾಜ್ಯ ಡೆಪ್ಯುಟಿ ಅಧ್ಯಕ್ಷ ಖಾಝಿ ಗುಲಾಂ ಹುಸೈನ್ ನೂರಿ, ಕರ್ನಾಟಕ ಟೆಂಟ್ ಆಂಡ್ ಡೆಕರೇಷನ್ ಸಮಿತಿ ಅಧ್ಯಕ್ಷ ಕರ್ನಾಟಕ ಮುಸ್ಲಿಂ ಜಮಾಅತ್ ಕೊಪ್ಪಳ ಜಿಲ್ಲಾ ಸಂಚಾಲಕ ಮಹಬೂಬ್ ಮುಲ್ಲಾ ಸಿದ್ದಾಪುರ, ಮುಹಮ್ಮದ್ ಆರಿಫ್, ಎಸ್ವೈಎಸ್ ಜಿಲ್ಲಾಧ್ಯಕ್ಷ ಮೌಲಾನ ನಝೀರ್ ಹಝ್ರತ್, ಎಸ್ಸೆಸ್ಸೆಫ್ ಕೊಪ್ಪಳ ಜಿಲ್ಲಾ ಅಧ್ಯಕ್ಷ ಮಹಬೂಬ್ ಬಸವಾಪಟ್ಟಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಫಿಝ್ ಸಲೀಂ, ದಸ್ತಗೀರ್ ಸಾಬ್ ಸಿದ್ದಾಪುರ, ಬಾಷು ಸಾಹೇಬ್ ಕಟಾಂಬ್ಲಿ, ಅಬ್ದುಲ್ ಹಮೀದ್ ಜಾಗೀರ್ದಾರ್ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ