ರಿಯಾದ್: ಸೌದಿ ಫೈನಾನ್ಸ್ ಫೋರಂ ವಿದೇಶಿ ಕಾರ್ಮಿಕರು ಮತ್ತು ಅವಲಂಬಿತರಿಗೆ ವಿಧಿಸಿರುವ ಲೆವಿಯನ್ನು ಮರು ಪರಿಶೀಲಿಸುವಂತೆ ಆಗ್ರಹಿಸಿದೆ. ಮೂರು ದಿನಗಳ ಆರ್ಥಿಕ ಫೋರಂನ ಎರಡನೇ ದಿನದ ಚರ್ಚೆಯಲ್ಲಿ ಈ ಬೇಡಿಕೆಯನ್ನು ಮುಂದಿಡಲಾಗಿದೆ.
ದೇಶದ ಮಧ್ಯಮ ಮತ್ತು ಸಣ್ಣ ಉದ್ಯಮಗಳ ಪ್ರಗತಿಯನ್ನು ನಿರ್ಣಯಿಸುವಲ್ಲಿ, ವಿದೇಶಿ ಕಾರ್ಮಿಕರು ಮತ್ತು ಅವರ ಅವಲಂಬಿತರ ಮೇಲೆ ವಿಧಿಸುವ ಲೆವಿಯ ಪರಿಣಾಮವನ್ನು ಪರಿಶೀಲಿಸುವುದು ಮುಖ್ಯ.
ವೀಸಾ ಶುಲ್ಕಗಳು ಉದ್ಯೋಗ ಮಾರುಕಟ್ಟೆಯ ಮೇಲೂ ಪ್ರತಿಕೂಲ ಪರಿಣಾಮ ಬೀರಿವೆ. ಸ್ಥಳೀಯ ಸಂಸ್ಥೆಗಳು (ಬಲದಿಯಾ) ವಿಧಿಸಿರುವ ಶುಲ್ಕವನ್ನು ಕೂಡ ಮರುಪರಿಶೀಲಿಸಬೇಕು ಎಂದು ಫೋರಂ ಸೂಚಿಸಿದೆ. ಜನವರಿ 21ರಿಂದ 23ರವರೆಗೆ ನಡೆಯುತ್ತಿರುವ ರಿಯಾದ್ ಆರ್ಥಿಕ ವೇದಿಕೆಯ ಶೀರ್ಷಿಕೆ ‘ಆರ್ಥಿಕ ಪ್ರಗತಿಯ ಆಧಾರವು ಮಾನವನಾಗಿರಬೇಕು’ ಎಂಬುದಾಗಿದೆ.
‘ಆರ್ಥಿಕ ಸುಧಾರಣೆಗಳು ದೇಶದ ಆರ್ಥಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರಿವೆ’ ಎಂಬ ಶೀರ್ಷಿಕೆಯಡಿಯಲ್ಲಿ ಎರಡನೇ ದಿನ ಹಣಕಾಸು ಸಚಿವ ಅಬ್ದುಲ್ ಅಝೀಝ್ ಅಲ್-ರಶೀದ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಣ್ಣ ಉದ್ಯಮಗಳ ಮೇಲೆ ಪರಿಣಾಮ ಬೀರಿದ ವಿವಿಧ ಶುಲ್ಕಗಳ ಬಗ್ಗೆ ಚರ್ಚೆ ನಡೆಯಿತು. ಡಾ. ಮುಹಮ್ಮದ್ ಅಲ್-ಅಬ್ಬಾಸ್ ಅಧ್ಯಯನದ ವರದಿಯನ್ನು ಮಂಡಿಸಿದರು. ಜಿಸಿಸಿ ಹಣಕಾಸು ಸಲಹೆಗಾರ ಮುಹಮ್ಮದ್ ಅಲ್ ಉಮ್ರಾನ್ ಮತ್ತು ಅಬ್ದುಲ್ ಮುಹ್ಸಿನ್ ಅಲ್ ಫಾರಿಸ್ ಚರ್ಚೆಯಲ್ಲಿ ಪಾಲ್ಗೊಂಡರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ