ಗುವಾಹಾಟಿ: ಗಣರಾಜ್ಯೋತ್ಸವ ಸಮಾರಂಭದ ದಿನ ಅಸ್ಸಾಂನಲ್ಲಿ ಒಟ್ಟು ನಾಲ್ಕು ಸ್ಫೋಟಗಳು ಸಂಭವಿಸಿವೆ. ಆದರೆ, ಅದೃಷ್ಟವಶಾತ್ ಈ ಬ್ಲಾಸ್ಟ್ ಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಕುರಿತು ವರದಿಯಾಗಿಲ್ಲ. ಈ ಬ್ಲಾಸ್ಟ್ ಗಳಲ್ಲಿ ಮೊದಲ ಮೂರು ಸ್ಫೋಟಗಳು ದಿಬ್ರುಗಡ್ ಜಿಲ್ಲೆಯಲ್ಲಿ ಸಂಭವಿಸಿದ್ದರೆ, ನಾಲ್ಕನೇ ಬ್ಲಾಸ್ಟ್ ಚರಾಯಿದೇವಿಯಲ್ಲಿ ಸಂಭವಿಸಿದೆ.
ಸ್ಫೋಟಗಳ ಕುರಿತು ಪ್ರತಿಕ್ರಿಯೆ ನೀಡಿರುವ ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ್ ಸೋನೋವಾಲ್ “ಪವಿತ್ರ ದಿನದ ಸಂಧರ್ಭದಲ್ಲಿ ಭಯದ ವಾತಾವರಣ ಸೃಷ್ಟಿಸಲು ನಡೆಸಲಾದ ಹೇಡಿತನದ ಕೃತ್ಯಗಳು” ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸರ್ವಾನಂದ್ ಸೋನೋವಾಲ್, “ಅಸ್ಸಾಂನ ಕೆಲ ಪ್ರದೇಶಗಳಲ್ಲಿ ನಡೆದ ಸ್ಫೋಟದ ಘಟನೆ ಖಂಡನಾರ್ಹವಾಗಿವೆ . ಜನರಿಂದ ತಿರಸ್ಕರಿಸಲ್ಪಟ್ಟ ಬಳಿಕ ಹತಾಶೆಗೊಂಡ ಭಯೋತ್ಪಾದಕ ಸಂಘಟನೆಗಳು ತಮ್ಮ ಕೋಪ ತೀರಿಸಿಕೊಳ್ಳಲು ಪವಿತ್ರ ದಿನದ ಸಂದರ್ಭದಲ್ಲಿ ನಡೆಸಿರುವ ಹೇಡಿತನದ ಕೃತ್ಯ ಇದಾಗಿದೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ತಮ್ಮ ಸರ್ಕಾರ ಬದ್ಧವಾಗಿದೆ” ಎಂದು ಹೇಳಿದ್ದಾರೆ.
ಅಸ್ಸಾಂನಲ್ಲಿ ನಿಷೇಧಕ್ಕೆ ಒಳಗಾಗಿರುವ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ(ಸ್ವತಂತ್ರ)(ಉಲ್ಫಾ-1), ರವಿವಾರ ಮಹಾ ಮುಷ್ಕರ ನಡೆಸಲು ನಾಗರಿಕರಿಗೆ ಕರೆ ನೀಡಿ, ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳದಂತೆ ಬೆದರಿಕೆಯೋಡ್ಡಿತ್ತು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ