janadhvani

Kannada Online News Paper

ರಾಜ್ಯ ಎಸ್ಸೆಸ್ಸೆಫ್ ನಿಂದ ಶಾಫಿ ಸಅದಿ ಉಸ್ತಾದರಿಗೆ ಸನ್ಮಾನ

ಬಂಟ್ವಾಳ:ರಾಜ್ಯ ವಕ್ಫ್ ಸದಸ್ಯರಾಗಿ ಆಯ್ಕೆಯಾದ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಫಿ ಸಅದಿ ಬೆಂಗಳೂರುರವರನ್ನು ಎಸ್ಸೆಸ್ಸೆಫ್ ರಾಜ್ಯ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಉಮ್ಮರ್ ಅಸ್ಸಖಾಫ್ ಮದನಿರವರು ಅಧ್ಯಕ್ಷತೆ ವಹಿಸಿದ್ದರು.ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ,ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ,ಕೋಶಾಧಿಕಾರಿ ರವೂಫ್ ಖಾನ್,ರಾಜ್ಯ ಕಾರ್ಯದರ್ಶಿಗಳಾದ ಹಾಫಿಳ್ ಯಾಕೂಬ್ ಸಅದಿ ನಾವೂರು,ಸಿರಾಜುದ್ದೀನ್ ಸಖಾಫಿ ಕನ್ಯಾನ, ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಅಶ್ರಫ್ ರಝಾ ಅಂಜದಿ,ಹುಸೈನ್ ಸಅದಿ ಹೊಸ್ಮಾರ್, ನವಾಝ್ ಭಟ್ಕಳ,ಸಫ್ವಾನ್ ಚಿಕಮಗಳೂರು, ಲತೀಫ್ ಸಖಾಫಿ ಮೊದಲಾದವರು ಉಪಸ್ಥಿತರಿದ್ದರು.