ಚಿತ್ರದುರ್ಗ ,ಫೆ.5: ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ವತಿಯಿಂದ ಉತ್ತರ ಕರ್ನಾಟಕದಲ್ಲಿ ಧಾರ್ಮಿಕ ಚಳವಳಿಗೆ ನೇತೃತ್ವ ನೀಡುತ್ತಿರುವ ಇಹ್ಸಾನ್ ದಾಈಗಳಿಗೆ ದ್ವಿಚಕ್ರ ವಾಹನವನ್ನು ಹಸ್ತಾಂತರ ಮಾಡಲಾಯಿತು.

ಉತ್ತರ ಕರ್ನಾಟಕದ ಬಳ್ಳಾರಿ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ಗದಗ, ಧಾರವಾಡ, ಬಾಗಲಕೋಟೆ ಹಾಗೂ ಬಿಜಾಪುರ ಜಿಲ್ಲೆಗಳ ಧಾರ್ಮಿಕತೆಯ ಕೊರತೆ ಇರುವ ಪ್ರದೇಶಗಳಲ್ಲಿ ಸುಮಾರು ಏಳೆಂಟು ವರ್ಷಗಳಿಂದ ಇಹ್ಸಾನ್ ಕಾರ್ಯಾಚರಣೆಗಳು ಅತ್ಯಂತ ಸಕ್ರಿಯವಾಗಿ ನಡೆಯುತ್ತಿದ್ದು ಅಲ್ಲಿನ ಹಳ್ಳಿಗಲ್ಲಿ ಚಟುವಟಿಕೆಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಸುಗಮ ಸಂಚಾರಕ್ಕಾಗಿ ದ್ವಿಚಕ್ರ ವಾಹನಗಳ ಅಗತ್ಯವಿತ್ತು. ಯುಎಇ ಕೆಸಿಎಫ್ ನಾಯಕರು ಹಾಗೂ ಕಾರ್ಯಕರ್ತರು ಈ ನಿಟ್ಟಿನಲ್ಲಿ ಸ್ಪಂದಿಸಿ ದ್ವಿಚಕ್ರ ವಾಹನಗಳ ವ್ಯವಸ್ಥೆ ಮಾಡಿದ್ದು ಮೊದಲ ಹಂತವಾಗಿ ಆರು ನೂತನ ದ್ವಿಚಕ್ರ ವಾಹನಗಳನ್ನು ಹಸ್ತಾಂತರಿಸಲಾಯಿತು.


ಇಹ್ಸಾನ್ ಕರ್ನಾಟಕ ಅಧ್ಯಕ್ಷ NKM ಶಾಫೀ ಸಅದಿ ಬೆಂಗಳೂರು ಹಾಗೂ ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ ಅಧ್ಯಕ್ಷ ಹಾಜಿ ಶೈಖ್ ಬಾವಾ ಅಬುಧಾಬಿ ಇಹ್ಸಾನ್ ದಾಈಗಳಿಗೆ ಹಸ್ತಾಂತರ ಮಾಡಿದರು.
ಇಹ್ಸಾನ್ ಕಾರ್ಯದರ್ಶಿ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ, ಅಬ್ದುಲ್ ಹಮೀದ್ ಮುಸ್ಲಿಯಾರ್ ನಗರ, ಬಿಎ ಇಬ್ರಾಹಿಂ ಸಖಾಫಿ, ಆದಂ ಸಖಾಫಿ ಚಿತ್ರದುರ್ಗ ಹಾಗೂ ಇಹ್ಸಾನ್ ದಾಈಗಳು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ