ಹೊಸದಿಲ್ಲಿ: ಇಲ್ಲಿನ ಪ್ರತಿಷ್ಠಿತ ಗಾರ್ಗಿ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣ ರಾಜಧಾನಿಯಲ್ಲಿ ಭಾರಿ ಕೋಲಾಹಲ ಎಬ್ಬಿಸಿದೆ. ಈ ಸಂಬಂಧ ಟ್ಟೀಟ್ ಮಾಡಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, “ನಮ್ಮ ಹೆಣ್ಣುಮಕ್ಕಳ ಜೊತೆಗಿನ ಅನುಚಿತ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ,” ಎಂದಿದ್ದಾರೆ.
ಮೂರು ದಿನಗಳ ಹಿಂದೆ ವಿದ್ಯಾರ್ಥಿನಿಯರ ಕಾಲೇಜಾದ ಗಾರ್ಗಿ ಕಾಲೇಜಿನ ಕ್ಯಾಂಪಸ್ಗೆ ನುಗ್ಗಿದ್ದ 35ಕ್ಕೂ ಹೆಚ್ಚು ಯುವಕರ ಗುಂಪು ವಿದ್ಯಾರ್ಥಿನಿಯರ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿತ್ತು. ಇವರಲ್ಲಿ ಕೆಲವರು ಕುಡಿದು ಬಂದಿದ್ದರು.
“ಗಾರ್ಗಿ ಕಾಲೇಜಿನಲ್ಲಿ ನಮ್ಮ ಹೆಣ್ಣುಮಕ್ಕಳೊಂದಿಗೆ ಕೆಟ್ಟದಾಗಿ ವರ್ತಿಸಿರುವುದು ದುಃಖಕರ ಮತ್ತು ನಿರಾಶದಾಯಕ. ಈ ರೀತಿಯ ನಡವಳಿಕೆಯನ್ನು ಸಹಿಸುವುದಿಲ್ಲ. ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಮತ್ತು ನಮ್ಮ ಕಾಲೇಜುಗಳಲ್ಲಿ ಓದುತ್ತಿರುವ ಮಕ್ಕಳು ಸುರಕ್ಷಿತವಾಗಿರುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು,” ಎಂದು ಅವರು ಟ್ಟೀಟ್ ಮಾಡಿದ್ದಾರೆ.
ಈ ಸಂಬಂಧ ದಿಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ. ಫೆಬ್ರವರಿ 6 ರಂದು ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವಿತ್ತು. ಇದಾದ ಬೆನ್ನಿಗೆ ಈ ಘಟನೆ ನಡೆದಿದೆ. ಪೊಲೀಸರು ಕಾಲೇಜು ಆವರಣದ ಸಿಸಿಟಿವಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಮಾಹಿತಿ ಆಧರಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇದರ ಜೊತೆಗೆ ರಾಷ್ಟ್ರೀಯ ಮಹಿಳಾ ಆಯೋಗ ಕೂಡ ತನಿಖೆಗೆ ಒಂದು ತಂಡವನ್ನು ಕಳುಹಿಸಿದೆ. “ಯುವತಿಯರಿಗೆ ಕಿರುಕುಳ ನೀಡಿದ್ದನ್ನು ನಾನು ಸಾಮಾಜಿಕ ಜಾಲತಾಣದಲ್ಲಿ ಓದಿದೆ. ಆಡಳಿತ ಮಂಡಳಿ ಈ ಸಂಬಂಧ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ನಾನು ತಂಡವೊಂದನ್ನು ಕಳುಹಿದ್ದೇನೆ. ಈ ತಂಡ ಪೊಲೀಸರು ಮತ್ತು ಪ್ರಾಂಶುಪಾಲರ ಜೊತೆ ಸಮಾಲೋಚನೆ ನಡೆಸಲಿದೆ. ನಂತರ ನಾನು ಈ ಬಗ್ಗೆ ವಿವರ ನೀಡುತ್ತೇನೆ,” ಎಂದು ಆಯೋಗ ಅಧ್ಯಕ್ಷೆ ರೇಖಾ ಶರ್ಮಾ ಹೇಳಿದ್ದಾರೆ.
ಘಟನೆ ಸಂಬಂಧ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಸೋಮವಾರ ಬೆಳಿಗ್ಗೆ ಕಾಲೇಜು ಗೇಟಿನ ಮುಂಭಾಗ ಪ್ರತಿಭಟನೆಯನ್ನೂ ನಡೆಸಿದ್ದಾರೆ.
ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಪ್ರಕಾರ ಫೆಬ್ರವರಿ 6 ರಂದು ಸಂಜೆ 6.30ರ ಸುಮಾರಿಗೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪು ಕಾಲೇಜು ಆವರಣಕ್ಕೆ ನುಗ್ಗಿ ವಿದ್ಯಾರ್ಥಿನಿಯರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಲ್ಲದೆ, ಕ್ಯಾಂಪಸ್ ತುಂಬಾ ಅವರನ್ನು ಬೆನ್ನಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಲೋಕಸಭೆಯಲ್ಲಿ ಪ್ರತಿಕ್ರಿಯೆ ನೀಡಿರುವ ಎಚ್ಆರ್ಡಿ ಸಚಿವ ರಮೇಶ್ ಪೋಕ್ರಿಯಾಲ್, ಗಾರ್ಗಿ ಕಾಲೇಜಿನಲ್ಲಿ ನಡೆದ ಘಟನೆ ತಪ್ಪು, ಈ ಸಂಬಂಧ ಕ್ರಮ ವಹಿಸಲು ಕಾಲೇಜು ಆಡಳಿತ ಮಂಡಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ