ಮಂಗಳೂರು: ಖಾಸಗಿ ಬಸ್ವೊಂದರಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಎದೆನೋವು ಕಾಣಿಸಿಕೊಂಡಿತ್ತು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ಯಾವುದೇ ನಿಲ್ದಾಣಗಳಲ್ಲಿ ನಿಲ್ಲಿಸದೆ ಆಂಬುಲನ್ಸ್ ನಂತೆ ನೇರವಾಗಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.
ನಗರದ ಹೊರವಲಯದ ತಲಪಾಡಿಯ ಕಿನ್ಯಾ ಗ್ರಾಮದಿಂದ ಮಂಗಳೂರಿಗೆ ಬರುತ್ತಿದ್ದ ಮಹೇಶ್ ಬಸ್ನಲ್ಲಿ ಮಹಿಳೆಯೊಬ್ಬರಿಗೆ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡಿತು.ಕೂಡಲೇ ಎಚ್ಚೆತ್ತುಕೊಂಡ ಬಸ್ ಚಾಲಕ ಪ್ರಮೋದ್ ಹಾಗೂ ನಿರ್ವಾಹಕ ಅಶ್ವಿತ್ ಬಸ್ಅನ್ನ ಹತ್ತಿರದ ಖಾಸಗಿ ಆಸ್ಪತ್ರೆ ಬಳಿ ಚಲಾಯಿಸಿಕೊಂಡು ಹೋಗಿ ನಿಲ್ಲಿಸಿದ್ದಾರೆ. ಚಾಲಕ, ನಿರ್ವಾಹಕನ ಈ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.
ಘಟನೆ:
ಬೆಳಿಗ್ಗೆ 10.30ಕ್ಕೆ ಕಿನ್ಯಾದಿಂದ ತೆರಳುವ ಬಸ್ಸಿನಲ್ಲಿ ಮೀನಾದಿ ನಿವಾಸಿ ಭಾಗ್ಯ(50) ಎಂಬ ಮಹಿಳೆ, ಇನ್ನೋರ್ವ ಮಹಿಳೆ ಜೊತೆಗೆ ಬಸ್ಸನ್ನೇರಿದ್ದರು. ಸೀಟಿನಲ್ಲಿ ಕುಳಿತಿದ್ದ ಭಾಗ್ಯ ಅವರು ಬಸ್ಸು ಕೆ.ಸಿ ರೋಡು ತಲುಪುತ್ತಿದ್ದಂತೆ ಎದೆನೋವು ಎಂದು ಬೊಬ್ಬೆ ಹಾಕಲು ಆರಂಭಿಸಿದರು. ಇದನ್ನು ಗಮನಿಸಿದ ಸಿಬ್ಬಂದಿ ಬಸ್ಸಿನಲ್ಲಿ ಪ್ರಯಾಣಿಕರಿದ್ದರೂ, ಎಲ್ಲಿಯೂ ನಿಲ್ಲಿಸದೆ ಸುಮಾರು 3 ಕಿ.ಮೀ ಉದ್ದಕ್ಕೆ ಬಸ್ಸು ಚಲಾಯಿಸಿ ಕೋಟೆಕಾರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಭಾಗ್ಯ ಅವರು ಜತೆಗಿದ್ದ ಮಹಿಳೆ ಜೊತೆಗೆ ಹೆಚ್ಚಿನ ಚಿಕಿತ್ಸೆಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಹೊರರೋಗಿಯಾಗಿ ಮಹಿಳೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದಾಗಿ ಮಹೇಶ್ ಬಸ್ಸು ಕಂಪೆನಿ ಪ್ರಬಂಧಕ ರಂಜಿತ್ ತಿಳಿಸಿದ್ದಾರೆ. ಶ್ರಮಿಕ ಸಂಘದ ಸದಸ್ಯರಾಗಿರುವ ಚಾಲಕ ಹಾಗೂ ನಿರ್ವಾಹಕರ ಸಮಯಪ್ರಜ್ಞೆ ಹಾಗೂ ಮಾನವೀಯತೆಯ ಗುಣಗಳನ್ನು ಸಂಘ ಹಾಗೂ ಬಸ್ಸು ಮಾಲೀಕ ಪ್ರಕಾಶ್ ಶೇಖ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್