ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ಅಮಾನುಷಿಕ ಹತ್ಯಾಕಾಂಡವು ದೇಶದ ಜಾತ್ಯತೀತ ಪರಂಪರೆಗೆ ಅವಮಾನವಾಗಿದ್ದು ಕೇಂದ್ರ ಸರಕಾರ ಹಾಗೂ ಗ್ರಹಸಚಿವರು ಇದರ ವಿರುದ್ಧ ತುಟಿಬಿಚ್ಚದೆ ಗಾಢ ನಿದ್ರೆಯಲ್ಲಿರುವುದು ಸಂಶಯಾಸ್ಪದವಾಗಿದೆ ಎಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಿಟಿಎಂ ಉಮರ್ ಅಸ್ಸಖಾಫ್ ಮದನಿಯವರು ತೀವ್ರವಾಗಿ ಖಂಡಿಸಿದರು.

ಈ ಪ್ರಜಾಪ್ರಭುತ್ವವನ್ನು ಕಗ್ಗೊಲೆಗೊಳಿಸುವ ಷಡ್ಯಂತ್ರದ ವಿರುದ್ಧ ರಾಜ್ಯಾದ್ಯಂತ ಎಲ್ಲಾ ಯುನಿಟ್ ಕೇಂದ್ರಗಳಲ್ಲಿ ನಾಳೆ (ಫೆಬ್ರವರಿ 28) ಜುಮಾ ನಮಾಝಿನ ಬಳಿಕ ಭಿತ್ತಿಪತ್ರ ಪ್ರದರ್ಶನ ಹಾಗೂ ಘೋಷಣೆಗಳು ನಡೆಯಲಿದ್ದು ಎಲ್ಲಾ ಯುನಿಟ್ ಕಾರ್ಯಕರ್ತರು ಇದರಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಬೇಕಾಗಿ ಉಮರ್ ಅಸ್ಸಖಾಫ್ ಮದನಿ ತಿಳಿಸಿದರು.
ನಾಳೆ ಜುಮಾ ಬಳಿಕ ರಾಷ್ಟ್ರ ರಾಜಧಾನಿಯ ಶಾಂತಿಗಾಗಿ ಪ್ರತ್ಯೇಕ ಪ್ರಾರ್ಥನೆ ಮಾಡಿ ಹುತಾತ್ಮರ ಹೆಸರಲ್ಲಿ ಜನಾಝ ನಮಾಝ್ ನಿರ್ವಹಿಸಲು ಪ್ರತ್ಯೇಕವಾಗಿ ಕರೆನೀಡಲಾಗಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ