ಟೆಹರಾನ್,ಮಾ.7: ದೆಹಲಿಯಲ್ಲಿ ಹಿಂದುತ್ವ ಉಗ್ರರಿಂದ ಮುಸ್ಲಿಮರ ಹತ್ಯಾಕಾಂಡದ ಬಗ್ಗೆ ಇರಾನ್ನ ಸರ್ವೋಚ್ಚ ನಾಯಕ ಅಯತುಲ್ಲಾ ಅಲಿ ಖುಮೇನಿ ಪ್ರತಿಕ್ರಿಯಿಸಿದ್ದು, ಭಾರತದಲ್ಲಿ ಮುಸ್ಲಿಮರ ಮೇಲಿನ ಹಿಂಸಾಚಾರವು ವಿಶ್ವದಾದ್ಯಂತ ಮುಸ್ಲಿಮರನ್ನು ನೋಯಿಸುತ್ತಿದೆ ಎಂದು ಅವರು ಹೇಳಿದರು.
‘‘ಭಾರತದಲ್ಲಿ ನಡೆಯುತ್ತಿರುವ ಮುಸ್ಲಿಮರ ಹತ್ಯಾಕಾಂಡದ ಬಗ್ಗೆ ಜಗತ್ತಿನಾದ್ಯಂತವಿರುವ ಮುಸ್ಲಿಮರ ಹೃದಯಗಳು ರೋದಿಸುತ್ತಿವೆ” “ಹಿಂದುತ್ವ ಉಗ್ರವಾದಿಗಳು ಮತ್ತು ಅವರ ಪಕ್ಷಗಳನ್ನು ಭಾರತ ಸರಕಾರವು ನಿಯಂತ್ರಿಸಬೇಕು ಇಲ್ಲದಿದ್ದಲ್ಲಿ, ಮುಸ್ಲಿಂ ಜಗತ್ತಿನಲ್ಲಿ ಭಾರತವು ಪ್ರತ್ಯೇಕವಾಗಲಿದೆ” ಎಂದು ಅವರು ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.
ಈ ಹಿಂದೆ ದೆಹಲಿ ಹತ್ಯಾಕಾಂಡದಲ್ಲಿ ಬ್ರಿಟಿಷ್ ಸಂಸತ್ತು ಕೇಂದ್ರ ಸರ್ಕಾರವನ್ನೂ ಟೀಕಿಸಿತ್ತು. ಬ್ರಿಟಿಷ್ ಸಂಸತ್ತಿನ ಹೌಸ್ ಆಫ್ ಕಾಮನ್ಸ್ ನಲ್ಲಿ, ಲೇಬರ್, ಎಸ್ಎನ್ಪಿ ಮತ್ತು ಕನ್ಸರ್ವೇಟಿವ್ ಪಕ್ಷದ ಸಂಸದರು ಭಾರತ ಸರ್ಕಾರವನ್ನು ಟೀಕಿಸಿದರು. ಪೌರತ್ವ ಕಾನೂನಿನ ತಿದ್ದುಪಡಿಯನ್ನು ಬ್ರಿಟಿಷ್ ಸಂಸದರು ದೂಷಿಸಿದರು.
ಒಂದು ನಿರ್ಧಿಷ್ಟ ಸಮುದಾಯವನ್ನು ಗುರಿಯಾಗಿಸಿ, ಕೇಂದ್ರಾಡಳಿತವು ನಡೆಸಿದ ನರಮೇಧಕ್ಕೆ ಈವರೆಗೆ 53 ಮಂದಿ ಮೃತಪಟ್ಟು,ನೂರಾರು ಮಂದಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ.ಸಾವಿರಾರು ಬಡಕುಟುಂಬಗಳು ಬೀದಿ ಪಾಲಾಗಿವೆ.















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ