ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಶೈಖುನಾ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಸಾರಥ್ಯದ ಕೇರಳ ರಾಜ್ಯ ಕಲ್ಲಿಕೋಟೆ ಕಾರಂದೂರು ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ವಿಶ್ವ ಖ್ಯಾತಿ ಪಡೆದ ಧಾರ್ಮಿಕ-ಲೌಖಿಕ ಮತ್ತು ವೈದಕೀಯ,ಕಾನೂನು ಶಿಕ್ಷಣ ಸಮುಚ್ಚಯ ಮರ್ಕಝ್ ಸಂಸ್ಥೆಯ 43 ನೇ ವಾರ್ಷಿಕ ಹಾಗೂ ಪದವಿ ಪ್ರಧಾನ ಸಮ್ಮೇಳನವು ಎಪ್ರಿಲ್ ತಿಂಗಳಲ್ಲಿ ನಡೆಯಲಿದ್ದು,ಅದರ ಪ್ರಚಾರಾರ್ಥ ಕಿನ್ಯ ಬುಖಾರಿ ಜುಮುಅ ಮಸ್ಜಿದ್ ನಲ್ಲಿ ದ.ಕ ಸಖಾಫಿ ಕೌನ್ಸಿಲ್ ವತಿಯಿಂದ ಪ್ರಚಾರ ಸಮಾವೇಶವು ನಾಳೆ (08/03/2020) ಆದಿತ್ಯವಾರ ಇಶಾ ನಮಾಝ್ ನಂತರ ಮಸ್ಜಿದ್ ಅಧ್ಯಕ್ಷ ಅಶ್ಅರಿಯ್ಯಾ ಮುಹಮ್ಮದ್ ಅಲೀ ಸಖಾಫಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ದ.ಕ ಜಿಲ್ಲಾ ಸಖಾಫಿ ಕೌನ್ಸಿಲ್ ಕಾರ್ಯದರ್ಶಿ ಮಹ್ಬೂಬುರ್ರಹ್ಮಾನ್ ಸಖಾಫಿ ಕಿನ್ಯ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮರ್ಕಝ್ ಸಂದೇಶ ಭಾಷಣವನ್ನು ಅಬ್ದುಲ್ ಜಬ್ಬಾರ್ ಸಖಾಫಿ ಪಾತೂರು ನಿರ್ವಹಿಸಲಿದ್ದಾರೆ
ಸಮಾವೇಶದಲ್ಲಿ ನಡೆಯುವ ಝಿಕ್ರ್ ಮಜ್ಲಿಸ್,ಅಜ್ಮೀರ್ ಮೌಲಿದ್ ಗಳಿಗೆ ಸಯ್ಯಿದ್ ಅಲವಿ ಅಲ್ ಹೈದ್ರೂಸಿ ತಂಙಳ್ ಹಾಗೂ ಸ್ಥಳೀಯ ಖತೀಬ್ ಉಸ್ಮಾನ್ ಸಖಾಫಿ ನೇತೃತ್ವ ನೀಡಲಿದ್ದಾರೆ.
ಎಸ್ಸೆಸ್ಸೆಫ್ ಕಿನ್ಯ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಝೈನುಲ್ ಆಬಿದ್ ಸಅದಿ ತಂಙಳ್,ಎಸ್.ವೈ.ಎಸ್ ರಾಜ್ಯ ನಾಯಕ ಇಸ್ಮಾಯಿಲ್ ಸಅದಿ ಕಿನ್ಯ ಸಹಿತ ಅನೇಕ ನಾಯಕರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ