ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್ ಇದರ ವತಿಯಿಂದ 3ನೇ ಆವೃತ್ತಿಯ ರಾಷ್ಟ್ರೀಯ ಮಟ್ಟದ ಪ್ರತಿಭೋತ್ಸವ – 2019 ವು ನಿಝ್ವ ದ ಹೈತುರಾತ್ ನ ಅಲ್ ಬುಸ್ತಾನ್ ಫಾರ್ಮ್ ಹೌಸ್ ನಲ್ಲಿ ಶುಕ್ರವಾರದಂದು ಬಹಳ ಯಶಸ್ವಿಯಾಗಿ ನಡೆಯಿತು.ಏಳು ಝೋನ್ ಗಳನ್ನು (ಮಸ್ಕತ್,ಬೌಶರ್,ಸೊಹಾರ್, ನಿಝ್ವ, ಸೀಬ್,ಸಲಾಲ,ಬುರೈಮಿ) ಒಳಗೊಂಡ ಪ್ರತಿಭೋತ್ಸವದಲ್ಲಿ ಕೆಸಿಎಫ್ಸೊಹಾರ್ ಝೋನ್ ಚಾಂಪಿಯನ್ ಪಟ್ಟವನ್ನು ಉಳಿಸಿಕೊಂಡರೆ, ದ್ವಿತೀಯ ಸ್ಥಾನವನ್ನು ಕೆಸಿಎಫ್ ಸೀಬ್ ಝೋನ್, ತೃತೀಯ ಸ್ಥಾನವನ್ನು ಕೆಸಿಎಫ್ ಬೌಶರ್ ಝೋನ್ ಪಡೆದು ಕೊಂಡರು. ವ್ಯಯಕ್ತಿಕ ಚಾಂಪಿಯನ್ ಆಗಿ ಕೆಸಿಎಫ್ ಸೊಹಾರ್ ಝೋನ್ ನ ಆರಿಫ್ ಮದಕ ಗಿಟ್ಟಿಸಿಕೊಂಡರು.
ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಜನಾಬ್ ಅಯ್ಯೂಬ್ ಕೊಡಿ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರೋಪ ಸಮಾರಂಭದಉದ್ಘಾಟನೆಯನ್ನು ಕೆಸಿಎಫ್ ಅಂತರರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಕಾರ್ಯದರ್ಶಿ ಬಹು ಉಮರ್ ಸಖಾಫಿ ಮಿತ್ತೂರ್, ಪ್ರಾಸ್ತಾವಿಕ ಭಾಷಣವನ್ನು ಕೆಸಿಎಫ್ ಒಮಾನ್ ಇದರ ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ ಇವರು ನೆರವೇರಿಸಿದರು.ಮುಖ್ಯ ಅಥಿತಿಯಾಗಿ ಸಯ್ಯಿದ್ ಮುಹಮ್ಮದ್ ಇಲ್ಯಾಸ್ ಅಹ್ಸನಿ ಅಲ್ ಜೀಲಾನಿ ನಿಝ್ವ, ಕೆಸಿಎಫ್ ಅಂತರರಾಷ್ಟ್ರೀಯ ಸಮಿತಿಯ ಆಡಳಿತ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಬೊಲ್ಮಾರ್ ಬರ್ಕ, ಹಾಗೂ ಸಂಘಟನಾ ಅಧ್ಯಕ್ಷರಾದಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ತಂಙಳ್ ಕೊಡಗು , ಕೋಶಾಧಿಕಾರಿ ಆರಿಫ್ ಕೊಡಿ , ಶಿಕ್ಷಣ ವಿಭಾಗದ ಅಧ್ಯಕ್ಷರಾದ ಉಬೈದುಲ್ಲಾ ಸಖಾಫಿ, ಹಂಝ ಹಾಜಿ ಕನ್ನಂಗಾರ್ ಅಧ್ಯಕ್ಷರು ಇಹ್ಸಾನ್ ಕರ್ನಾಟಕ, ಇಬ್ರಾಹಿಮ್ ಅತ್ರಾಡಿ ಅಧ್ಯಕ್ಷರು ಸಾಂತ್ವನ ವಿಭಾಗ, ಶಮೀರ್ ಉಸ್ತಾದ್ ಹೂಡೆ ಅಧ್ಯಕ್ಷರು ಪಬ್ಲಿಷಿಂಗ್ ವಿಭಾಗ, ಖಾಸಿಂ ಹಾಜಿ ಅಧ್ಯಕ್ಷರು ಆಡಳಿತ ವಿಭಾಗ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ಮತ್ತ ನಿಝ್ವ ಝೋನ್ ಅಧ್ಯಕ್ಷರಾದ ಬಾಷ ತೀರ್ಥಹಳ್ಳಿ, ಪ್ರತಿಭೋತ್ಸವ ಸ್ವಾಗತ ಸಮಿತಿ ಚಯರ್ಮೆನ್ ಅಬ್ಬಾಸ್ ಮರಕಡ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ವಿವಿಧ ವಿಭಾಗದ ಕಾರ್ಯದರ್ಶಿಗಳಾದ ಸಂಶದ್ದೀನ್ ಪಾಲ್ತಡ್ಕ, ಸಿದ್ದೀಕ್ ಮಾಂಬ್ಲಿ ಸುಳ್ಯ, ಅಶ್ರಫ್ ಭಾರತ್ ಸುಳ್ಯ, ಇಕ್ಬಾಲ್ ಎರ್ಮಾಲ್, ಇರ್ಫಾನ್ ಕೂರ್ನಡ್ಕ, ಹಾಗೂ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ನಾಯಕರು ಗಳು ಮತ್ತು ವಿವಿಧ ಝೋನ್ ನಾಯಕರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಫ್ಯಾಮಿಲಿ ಮೀಟ್ ಮತ್ತು ಮಹಿಳೆಯರ ಮತ್ತು ಮಕ್ಕಳ ವಿಭಾಗದ ಸ್ಪರ್ಧಾತ್ಮಕ ಕಾರ್ಯಕ್ರಮ ನಡೆಯಿತು.ಸ್ವಾಗತ ಸಮಿತಿ ಕನ್ವೀನರ್ ಝುಬೈರ್ ಸ ಅದಿ ಪಾಟ್ರಕೋಡಿ ಸ್ವಾಗತಿಸಿ ,ಕಲಂದರ್ ಬಾವ ಪರಪ್ಪು ಕಾರ್ಯಕ್ರಮ ನಿರೂಪಿಸಿದರು.ಪ್ರಸ್ತುತ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿಯನ್ನು ಕೆಸಿಎಫ್ ನಿಝ್ವ ಝೋನ್ ಸಮಿತಿಯರು ವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಅಬ್ದುಲ್ ರಹೀಮ್ ಬಿಡುಗಡೆ ಆದೇಶಕ್ಕೆ ಸಹಿ – 20 ವರ್ಷಗಳ ಸೆರೆಮನೆ ವಾಸಕ್ಕೆ ಕೊನೆಗೂ ಮುಕ್ತಿ
ಬಕ್ರೀದ್ ‘ಈದ್ ಅಲ್-ಅದ್ಹಾ’ ; 382 ಕೈದಿಗಳ ಬಿಡುಗಡೆ- ಒಮಾನ್ ದೊರೆ ಆದೇಶ
ಈದುಲ್ ಅದ್’ಹಾ ಮುಬಾರಕ್ – ಯುಎಇ ಯಲ್ಲಿ 2700 ಕ್ಕೂ ಹೆಚ್ಚು ಖೈದಿಗಳಿಗೆ ಬಿಡುಗಡೆ ಭಾಗ್ಯ
‘ಲಬ್ಬೈಕ್ ಅಲ್ಲಾಹುಮ್ಮ ಲಬ್ಬೈಕ್’ ಪುಣ್ಯ ಭೂಮಿಯಲ್ಲಿ 20 ಲಕ್ಷಕ್ಕೂ ಹೆಚ್ಚು ಯಾತ್ರಿಕರ ಸಮಾಗಮ- ಇಂದು ‘ಅರಫಾತ್ ಸಂಗಮ’
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವೈದ್ಯಕೀಯ ಕ್ಷೇತ್ರಕ್ಕೆ ಗಂಭೀರ ಸವಾಲು : ಎಸ್ಸೆಸ್ಸೆಫ್ ಬೆಂಗಳೂರು
ಕಾನೂನುಬದ್ಧ ಬಲಿದಾನಕ್ಕೆ ಪೊಲೀಸ್ ಸಂರಕ್ಷಣೆ ನೀಡಿ- ಗೃಹ ಸಚಿವರಿಗೆ ಮೌಲಾನಾ ಶಾಫಿ ಸಅದಿ ಮನವಿ
‘ನನ್ನನ್ನು ತಿಹಾರ್ ಜೈಲಿಗೆ ಹಾಕಬಹುದು’; ಆತಂಕ ಹಂಚಿಕೊಂಡ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ
ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಶಾಫಿ ಸಅದಿ ಅವರಿಂದ ಸಚಿವರಿಗೆ ಮನವಿ
ಉಪ್ಪಿನಂಗಡಿ: ಕಂಪ್ಯೂಟರ್ ಕ್ಲಾಸ್ಗೆ ತೆರಳಿದ್ದ 13 ವರ್ಷದ ಬಾಲಕ ನಾಪತ್ತೆ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್